Home / ಲೇಖನ / ಇತರೆ / ವಚನ ವಿಚಾರ – ಹೀಗೆ ಸಂತೋಷ

ವಚನ ವಿಚಾರ – ಹೀಗೆ ಸಂತೋಷ

ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತಾಯಿತ್ತು
ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ
ಇಹದ ಸುಖ ಪರದ ಗತಿ ನಡೆದು ಬಂದಂತಾತ್ತು ನೋಡಾ ಎನಗೆ
ಚೆನ್ನಮಲ್ಲಿಕಾರ್ಜುನಯ್ಯಾ
ಗುರುಪಾದವ ಕಂಡು ಧನ್ಯಳಾದೆ ನೋಡಾ

[ಅರಲುಗೊಂಡ ಬತ್ತಿದ ಬರಲುಗೊಂಡ-ಒಣಗಿದ]

ಅಕ್ಕಮಹಾದೇವಿಯ ವಚನ. ಅಕ್ಕ ತನ್ನ ಗುರುವನ್ನು ಕಂಡು ಆದ ಸಂತೋಷವನ್ನಿಲ್ಲಿ ವ್ಯಕ್ತಪಡಿಸಿದ್ದಾಳೆ. ಈ ವಚನದ ಚೆಲುವು ಇರುವುದು ಆಕೆ ಬಳಸಿರುವ ಹೋಲಿಕೆಗಳಲ್ಲಿ, ಮಾತಿನ ಲಯದಲ್ಲೇ ಮನಸ್ಸಿಗೆ ಆದ ಸಂತೋಷ ನೆಮ್ಮದಿಗಳನ್ನು ಪ್ರಕಟಿಸಿರುವ ರೀತಿಯಲ್ಲಿ.

ಬತ್ತಿ ಹೋದ ಕೆರೆಗೆ ತೊರೆಯೇ ಹರಿದು ಬಂದರೆ ಬತ್ತಿದ ಕೆರೆಗೆ ಆಗುವ ಸಂತೋಷದಂತೆ, ಒಣಗಿ ಬರಲು ಬರಲಾಗಿರುವ ಸಸಿಯ ಮೇಲೆ ಮಳೆ ಸುರಿದಾಗ ಆಗುವ ಸಂತೋಷದಂತೆ ಗುರುವಿನ ಪಾದ ಕಂಡಾಗ ನನಗನ್ನಿಸಿತು. ಇಹದ ಸುಖ, ಪರದ ಗತಿ ನನ್ನತ್ತ ನಡೆದುಬಂದಂತಾಯಿತು ಎನ್ನುತ್ತಾಳೆ.

ಬತ್ತಿ ಹೋದದ್ದು, ನಿರ್ಜೀವವೇ ಆದದ್ದು ಮತ್ತೆ ತುಂಬಿಕೊಂಡ, ಜೀವಂತವಾದ ಸಾರ್ಥಕತೆ ಗುರುವನ್ನು ಕಂಡಾಗ ಆಯಿತು. ಇದು ಇಹದ ಸುಖ, ಹಾಗೆಯೇ ಗುರುವು ಪರದ ದಾರಿಯನ್ನೂ ಮುಂದಿನ ಗತಿಯನ್ನೂ ತೋರಬಲ್ಲವನು. ಗುರುವನ್ನು ದೈವದ ಇನ್ನೊಂದು ರೂಪವೇ ಎಂದು ಕಾಣುವುದರಿಂದ ಚನ್ನಮಲ್ಲಿಕಾರ್ಜುನನನ್ನು ತೋರಬಲ್ಲಾತನ ಕಂಡ ಸಂತೋಷವನ್ನು ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...