Home / ಲೇಖನ / ಇತರೆ / ವಚನ ವಿಚಾರ – ಹೀಗೆ ಸಂತೋಷ

ವಚನ ವಿಚಾರ – ಹೀಗೆ ಸಂತೋಷ

ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತಾಯಿತ್ತು
ಬರಲುಗೊಂಡ ಸಸಿಗೆ ಮಳೆ ಸುರಿದಂತಾಯಿತ್ತು ನೋಡಾ ಇಂದೆನಗೆ
ಇಹದ ಸುಖ ಪರದ ಗತಿ ನಡೆದು ಬಂದಂತಾತ್ತು ನೋಡಾ ಎನಗೆ
ಚೆನ್ನಮಲ್ಲಿಕಾರ್ಜುನಯ್ಯಾ
ಗುರುಪಾದವ ಕಂಡು ಧನ್ಯಳಾದೆ ನೋಡಾ

[ಅರಲುಗೊಂಡ ಬತ್ತಿದ ಬರಲುಗೊಂಡ-ಒಣಗಿದ]

ಅಕ್ಕಮಹಾದೇವಿಯ ವಚನ. ಅಕ್ಕ ತನ್ನ ಗುರುವನ್ನು ಕಂಡು ಆದ ಸಂತೋಷವನ್ನಿಲ್ಲಿ ವ್ಯಕ್ತಪಡಿಸಿದ್ದಾಳೆ. ಈ ವಚನದ ಚೆಲುವು ಇರುವುದು ಆಕೆ ಬಳಸಿರುವ ಹೋಲಿಕೆಗಳಲ್ಲಿ, ಮಾತಿನ ಲಯದಲ್ಲೇ ಮನಸ್ಸಿಗೆ ಆದ ಸಂತೋಷ ನೆಮ್ಮದಿಗಳನ್ನು ಪ್ರಕಟಿಸಿರುವ ರೀತಿಯಲ್ಲಿ.

ಬತ್ತಿ ಹೋದ ಕೆರೆಗೆ ತೊರೆಯೇ ಹರಿದು ಬಂದರೆ ಬತ್ತಿದ ಕೆರೆಗೆ ಆಗುವ ಸಂತೋಷದಂತೆ, ಒಣಗಿ ಬರಲು ಬರಲಾಗಿರುವ ಸಸಿಯ ಮೇಲೆ ಮಳೆ ಸುರಿದಾಗ ಆಗುವ ಸಂತೋಷದಂತೆ ಗುರುವಿನ ಪಾದ ಕಂಡಾಗ ನನಗನ್ನಿಸಿತು. ಇಹದ ಸುಖ, ಪರದ ಗತಿ ನನ್ನತ್ತ ನಡೆದುಬಂದಂತಾಯಿತು ಎನ್ನುತ್ತಾಳೆ.

ಬತ್ತಿ ಹೋದದ್ದು, ನಿರ್ಜೀವವೇ ಆದದ್ದು ಮತ್ತೆ ತುಂಬಿಕೊಂಡ, ಜೀವಂತವಾದ ಸಾರ್ಥಕತೆ ಗುರುವನ್ನು ಕಂಡಾಗ ಆಯಿತು. ಇದು ಇಹದ ಸುಖ, ಹಾಗೆಯೇ ಗುರುವು ಪರದ ದಾರಿಯನ್ನೂ ಮುಂದಿನ ಗತಿಯನ್ನೂ ತೋರಬಲ್ಲವನು. ಗುರುವನ್ನು ದೈವದ ಇನ್ನೊಂದು ರೂಪವೇ ಎಂದು ಕಾಣುವುದರಿಂದ ಚನ್ನಮಲ್ಲಿಕಾರ್ಜುನನನ್ನು ತೋರಬಲ್ಲಾತನ ಕಂಡ ಸಂತೋಷವನ್ನು ಈ ವಚನ ಹೇಳುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...