Home / ಕವನ / ಕವಿತೆ / ಮುಕ್ತಿ ಮಂತ್ರ

ಮುಕ್ತಿ ಮಂತ್ರ

ಗಟ್ಟಿಯಾಗದೇ ಬದುಕು ದಕ್ಕದುನ್ನು
ಕೆರೆ ಬಾವಿಗಳ ಪಾಲು ಆಗದಿರು
ಹಗ್ಗದ ಉರುಳಿಗೆ
ನಿನ್ನ ಕೊರಳ ನೀಡದೇ
ಸುತ್ತಲೂ ಕಟ್ಟಿದ ಉಕ್ಕಿನ ಗೋಡೆ
ಬೆಂಕಿಯ ಜ್ವಾಲೆಗೆ ದೂಡುವ
ಕೈಗಳನ್ನು ಕತ್ತರಿಸಲು
ಝಳಪಿಸುವ ಖಡ್ಗವಾಗು.
ಶತ್ರುಗಳ ಸೆಣಸಿ ನಿಲ್ಲಲು
ಆತ್ಮವಿಶ್ವಾಸದ ಆಯುಧವಾಗು,
ಏನಾದರೂ ಆಗು ಕೊನೆಗೆ
ದಹಿಸುವ ಜ್ವಾಲೆಗಳ ನಂದಿಸಲು
ಸ್ವಾತಿಯ ಮುತ್ತಿನ ಮಳೆಯಾಗು,
ಅನಂತ ಜೀವನದ ವ್ಯಥೆಗಳು
ಅಮೂಲ್ಯ ಬದುಕು ಚಿವುಟಿ
ನಿರರ್ಥಕ ನಿಟ್ಟುಸಿರಾಗದೇ
ಸಮೃದ್ಧ ನೆಲದಲ್ಲಿ
ಹಸಿರುಟ್ಟು ಬೇರು ಬಿಟ್ಟು
ಅಸ್ತಿತ್ವಕ್ಕೆ ಅರ್ಥ ನೀಡುವ
ಕಂಪ ಸೂಸುವ
ಸಂಪಿಗೆ ಮರವಾಗು,
ಬಿದ್ದ ಮಳೆಗೆ ನೆಲದ ಹಸಿಗೆ
ಧರೆಯ ಎದೆಯಲಿ ರೋಮಾಂಚನ
ಎದೆಯಲಿ ಧವನ ಚಿಗಿತು
ಮೈಮನಗಳಲ್ಲಿ ಮಿಂಚಿನ ಸಂಚಾರ
ಹೊಳೆವ ಕಾಂತಿಯ ಕಣ್ಣುಗಳಲಿ
ಆತ್ಮವಿಶ್ವಾಸದ ದೃಢ ನಿರ್ಧಾರ
ಉಕ್ಕಿ ಹರಿದಿದೆ ಜೀವಜಲ.
ಧಮನಿಗಳಲಿ ನಿರಂತರ
ಬಿಗಿದಿರುವ ನರನಾಡಿಗಳಿಗೆ
ಸ್ನೇಹದ ತಂಪು ಸಿಂಚನ
ಬದುಕಿನ ಹುಡುಕಾಟ,
ಅದೇ ಕ್ಷಣ ಮತ್ತೇ ಮತ್ತೇ
ಬದುಕು ಒಳಹೊರಗು ಹುಡುಕುತ್ತ
ಗಡಿರೇಖೆಗಳ ಮೆಟ್ಟಿ ನಿಂತು
ಬದುಕುವ ಬದುಕಿಸುವ ಪ್ರಯತ್ನ
ಆಗಲಿ ಇದುವೇ ಮುಕ್ತಿ ಮಂತ್ರ
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...