ಗಟ್ಟಿಯಾಗದೇ ಬದುಕು ದಕ್ಕದುನ್ನು
ಕೆರೆ ಬಾವಿಗಳ ಪಾಲು ಆಗದಿರು
ಹಗ್ಗದ ಉರುಳಿಗೆ
ನಿನ್ನ ಕೊರಳ ನೀಡದೇ
ಸುತ್ತಲೂ ಕಟ್ಟಿದ ಉಕ್ಕಿನ ಗೋಡೆ
ಬೆಂಕಿಯ ಜ್ವಾಲೆಗೆ ದೂಡುವ
ಕೈಗಳನ್ನು ಕತ್ತರಿಸಲು
ಝಳಪಿಸುವ ಖಡ್ಗವಾಗು.
ಶತ್ರುಗಳ ಸೆಣಸಿ ನಿಲ್ಲಲು
ಆತ್ಮವಿಶ್ವಾಸದ ಆಯುಧವಾಗು,
ಏನಾದರೂ ಆಗು ಕೊನೆಗೆ
ದಹಿಸುವ ಜ್ವಾಲೆಗಳ ನಂದಿಸಲು
ಸ್ವಾತಿಯ ಮುತ್ತಿನ ಮಳೆಯಾಗು,
ಅನಂತ ಜೀವನದ ವ್ಯಥೆಗಳು
ಅಮೂಲ್ಯ ಬದುಕು ಚಿವುಟಿ
ನಿರರ್ಥಕ ನಿಟ್ಟುಸಿರಾಗದೇ
ಸಮೃದ್ಧ ನೆಲದಲ್ಲಿ
ಹಸಿರುಟ್ಟು ಬೇರು ಬಿಟ್ಟು
ಅಸ್ತಿತ್ವಕ್ಕೆ ಅರ್ಥ ನೀಡುವ
ಕಂಪ ಸೂಸುವ
ಸಂಪಿಗೆ ಮರವಾಗು,
ಬಿದ್ದ ಮಳೆಗೆ ನೆಲದ ಹಸಿಗೆ
ಧರೆಯ ಎದೆಯಲಿ ರೋಮಾಂಚನ
ಎದೆಯಲಿ ಧವನ ಚಿಗಿತು
ಮೈಮನಗಳಲ್ಲಿ ಮಿಂಚಿನ ಸಂಚಾರ
ಹೊಳೆವ ಕಾಂತಿಯ ಕಣ್ಣುಗಳಲಿ
ಆತ್ಮವಿಶ್ವಾಸದ ದೃಢ ನಿರ್ಧಾರ
ಉಕ್ಕಿ ಹರಿದಿದೆ ಜೀವಜಲ.
ಧಮನಿಗಳಲಿ ನಿರಂತರ
ಬಿಗಿದಿರುವ ನರನಾಡಿಗಳಿಗೆ
ಸ್ನೇಹದ ತಂಪು ಸಿಂಚನ
ಬದುಕಿನ ಹುಡುಕಾಟ,
ಅದೇ ಕ್ಷಣ ಮತ್ತೇ ಮತ್ತೇ
ಬದುಕು ಒಳಹೊರಗು ಹುಡುಕುತ್ತ
ಗಡಿರೇಖೆಗಳ ಮೆಟ್ಟಿ ನಿಂತು
ಬದುಕುವ ಬದುಕಿಸುವ ಪ್ರಯತ್ನ
ಆಗಲಿ ಇದುವೇ ಮುಕ್ತಿ ಮಂತ್ರ
*****
Related Post
ಸಣ್ಣ ಕತೆ
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ದುರಾಶಾ ದುರ್ವಿಪಾಕ
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
-
ಗ್ರಹಕಥಾ
[ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…
-
ಪ್ರಕೃತಿಬಲ
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…