ಆತ್ಮ ಮತ್ತು ಸಾಕ್ಷಿ

ಪ್ರೀತಿ ದ್ವೇಷದ ರಹಸ್ಯಗಳು
ಆತ್ಮವನ್ನು ಕುಟುಕಿದ ನಿಗೂಢಗಳು
ಪಾತಾಳಕ್ಕೆ ಕುಸಿಯುವ ಕನಸುಗಳು
ಕ್ಷಣ ಕ್ಷಣಕ್ಕೂ ಬೆತ್ತಲಾಗುತ್ತಿರುವ
ಪಾಪ ತುಂಬಿದ ಆತ್ಮಗಳು

ಅಲೆಮಾರಿ ಮೋಡಗಳು
ಪಾಪಾತ್ಮಗಳನ್ನು ತೊಳೆಯಲು
ಮಳೆಯನ್ನು ತರಲಿಲ್ಲ
ಕಲಬೆರಿಕೆ ಕನಸುಗಳು
ಭೂಮಿ ಸೂರ್‍ಯರು ಸಂಧಿಸುವ
ಸುಂದರ ಸಂಜೆಯಲಿ
ಮಲೀನವಾದ ಹೃದಯಗಳ
ಮುಸುಕನ್ನು ಸರಿಸದೇ ಹೋದವು.

ಮುಸುಕು ಸರಿಸಿ ಇಣುಕಿದರೆ
ಮುಳುಗುತ್ತಿರುವ ಸೂರ್‍ಯ.
ಕೆಂಪು ರಕ್ತದ ಮಡುವಿನಲಿ
ಕೊಲೆಯಾಗಿ ಬಿದ್ದಿದ್ದನು,
ಎಂತಹ ಸಾವು ಸೂರ್ಯನದು,
ಸಾಕ್ಷಿಗಳಿಲ್ಲ, ಸತ್ತ ಶವಕ್ಕೆ
ಅಳುವ ವಾರಸುದಾರರಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾರನೆ ಶ್ರೀರಾಮ
Next post ‘ಆಹಾ…! ಬಣ್ಣದ ಚಿಟ್ಟೆ’

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…