Home / ಕವನ / ಕವಿತೆ / ಮಾಗಿದ ಕನಸುಗಳು

ಮಾಗಿದ ಕನಸುಗಳು

ನನ್ನ ಬಾಗಿ ಕಾಮನಬಿಲಾದ ಬೆನ್ನು
ಗುಳಿಬಿದ್ದ ಕಣ್ಣು ಸುಕ್ಕುಗಟ್ಟಿ
ಗೆರೆಮೂಡಿ ಮಾಗಿದ ಮುಖ
ನಡುಗುತ್ತಿರುವ ಕೈಗಳಲ್ಲಿ
ನನ್ನ ಕನಸಿನ ವಸಂತಗಳನ್ನು
ಭದ್ರವಾಗಿ ಹಿಡಿದಿಡಲು
ನಿರಂತರ ತವಕಿಸುತ್ತೇನೆ.

ನನ್ನವನ ಪ್ರೀತಿ ತುಂಬಿದ ಪತ್ರಗಳನ್ನು
ಹಳೆಯ ಪೆಟ್ಟಿಗೆಯಿಂದ ಹೊರತೆಗೆದು
ಪ್ರೀತಿಯಿಂದ ನಡುಗುವ ಕೈ ಸವರಿ
ಆತ್ಮೀಯವಾಗಿ ಓದಿದಾಗ ಹಸಿರಾಗುತ್ತೇನೆ.
ಎಪ್ಪತ್ತರ ಅಂಚಿನಲ್ಲಿಯೂ ನಾನು
ಇಪ್ಪತ್ತರ ಹರೆಯ ಅನುಭವಿಸುತ್ತೇನೆ.

ದಿನಗಳು ಉರುಳಿ – ನೆರಳು ಬೆಳಕಿನಾಟ
ಕಾಲದ ಭೂತದಲ್ಲಿ ಹುಗಿದ ನೆನಪುಗಳು
ನೆನಪಿನಾಳದಲಿ ಹೂತ ಅಮರ ಪತ್ರಗಳು
ನನ್ನ ಕಣ್ಣು ರೆಪ್ಪೆಯಲ್ಲಿ ಬಚ್ಚಿಟ್ಟ
ಅಸಂಖ್ಯ ಅರ್ಥಗಳು – ಕಥೆಗಳು

ಮುಚ್ಚಿದ ನನ್ನ ಕಣ್ಣುಗಳಿಂದ
ಘಮ್ಮೆಂದು ಹೊರಸೂಸುವ
ಆತ್ಮದ ಅನುಭವದ ಸುಗಂಧ ಪರಿಮಳ
ಪಕ್ಕೆಗೂಡುಗಳ ಮೇಲೆ ತೇಲುವ
ಎಲುಬಿನ ಬರೀ ಹಂದರದಲಿ
ಕನಸಿನ ನಕ್ಷತ್ರಗಳ ಲೋಕವಿದೆ
ಭವಿಷ್ಯತ್ತಿನಲಿ ಹೊಸ ನಿರ್ಮಾಣ
ಕಾಣಲು ತವಕಿಸುವ ಹಂಬಲವಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...