Home / ಬಾಲ ಚಿಲುಮೆ / ಕಥೆ / ಕುಲ್ಡಪ್ಪ ಶೆಟ್ಟಿ ಕಥೆ

ಕುಲ್ಡಪ್ಪ ಶೆಟ್ಟಿ ಕಥೆ

ಬಹಳ ಹಿಂದೆ ಒಂದು ಹಳ್ಳಿಯಿತ್ತು. ಆ ಹಳ್ಳಿಯಲ್ಲಿ ಕುಲ್ಡಪ್ಪ ಶೆಟ್ಟಿ ಎಂಬ ಮಹಾ ವರ್ತಕನಿದ್ದ.

ಆತ ಒಂದು ಉತ್ತಮವಾದ ಬಿಳಿ ಕತ್ತೆ ಸಾಕಿದ್ದ. ಆ ಕತ್ತೆ ಮೇಲೆ ಕುಳಿತು ಶಿರೇಕೊಳ್ಳ- ದೇವಸಮುದ್ರ- ರಾಂಪುರ ಸಂತೆಗಳಿಗೆ ಹೋಗಿ ಮುತ್ತು, ರತ್ನ, ವಜ್ರ, ವೈಡೂರ್ಯ, ಮಾಣಿಕ್ಯದ ವ್ಯಾಪಾರ ಮಾಡಿ ಬರುತ್ತಿದ್ದ, ಭಾರೀ ಭಾರೀ ಶ್ರೀಮಂತನಾಗಿದ್ದ. ಸುತ್ತ ೧೮ ಹಳ್ಳಿಗೆಲ್ಲ ಕುಲ್ಡಪ್ಪ ಶೆಟ್ಟಿ ಒಂದು ಕತ್ತೆ ಕಟ್ಟಿ ದೊಡ್ಡ…. ಹೆಸರು ವಾಸಿಯಾಗಿದ್ದ…!

ಅದೇ ಹಳ್ಳಿಯ ಮೂಲೆಯಲ್ಲಿ ಮೃತ್ಯುಂಜಯನೆಂಬ ಗುಡಿ ಪೂಜಾರಿಯೊಬ್ಬನಿದ್ದ. ಇವನು ಗುಡಿ ಪೂಜಾರಿಕೆ ಒಂದನ್ನು ಬಿಟ್ಟು ಜೊಲ್ಲು ಸುರಿಸುತ್ತಾ… ಇಡೀ ಹಳ್ಳಿಯ ಮೇಲು ಉಸಾಬರಿಕೆ ಮಾಡಿ ನಿತ್ಯ ಎಲ್ಲರ ಮೇಲೆ ಸುಮ್ಮನೇ ಕರುಬುತ್ತಿದ್ದ. ಬರೀ ಬೂಟಾಟಿಕೆ ನಡೆಸಿದ್ದ, ಎಲ್ಲರಿಗೆ ತಲೆನೋವಾಗಿ ಪರಿಣಮಿಸಿದ್ದ.

ಒಮ್ಮೆ- ಕುಲ್ಡಪ್ಪ ಶೆಟ್ಟಿಯನ್ನು ಮೃತ್ಯುಂಜಯ ಅಡ್ಡಗಟ್ಟಿ- “ಶೆಟ್ಟಿ… ಶೆಟ್ಟಿಽಽ… ನಿನ್ನ ಅದೃಷ್ಟವಂತದ ಬಿಳಿ ಕತ್ತೆಯನ್ನು ನನಗೆ ಮಾರಿ ಬಿಡು, ಗುಡಿ ಮುಂದಲ ತೋಟ, ಗದ್ದೆ, ಮಾಗಣೆ, ಹೊಲ… ನಿನಗೆ ಕೊಡ್ತೀನಿ! ನನಗದು ಕತ್ತೆಯಾಗಿ ಕಾಣುತ್ತಿಲ್ಲ! ಬಿಳಿ ಅರಬಿಯನ್ ಕುದುರೆಯಾಗಿ ಕಾಣುತ್ತಿದೆ. ನಾನೂ ನಿನ್ನಂಗೇ ವ್ಯಾಪಾರ ಮಾಡಿ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕೆಂದಿದ್ದೇನೆ” ಎಂದ… ಮೃತ್ಯುಂಜಯ…ಽಽ…

ಕುಲ್ಡಪ್ಪ ಶೆಟ್ಟಿ ಗಹಗಹಿಸಿ ನಕ್ಕ.

“ನೀ ಬುದ್ಧಿಗೇಡಿ ಪೂಜಾರಿ ಇದ್ದೀಗಿ. ಮನೆ ಮುಂದೆ ಗುಡಿ, ನಿತ್ಯ ಮೂರು ಹೊತ್ತು ಪೂಜಾರಿಕೆ ಮಾಡಿಕೊಂಡು ಹಣ್ಣು, ಕಾಯಿ, ಪ್ರಸಾದ, ಹೂವು, ತೀರ್‍ಥ, ಫನ್ನೀರು, ಚಂದನ ಎಂದು ಖುಷಿಖುಷಿಯಾಗಿರದೂ ಬಿಟ್ಟು ಹಳ್ಳಿಹಳ್ಳಿ ತಿರುಗಿ ನೀ ಏನು ವ್ಯಾಪಾರ ಮಾಡೀಗಿ? ನಿನ್ನ ಹೊಟ್ಟೆ ಕರಗಿ ನೀರಾಗಿ ಗುಂಡೇರಹಳ್ಳವಾಗಿ ಹರಿವದು” ಎಂದು, ಬಲು ವ್ಯಂಗ್ಯ ಮಾಡಿ ನಕ್ಕು, ಬಿಳಿ ಕತ್ತೆ ಏರಿ ಹೊರಟೇ ಬಿಟ್ಟ….!

ಮೃತ್ಯುಂಜಯನಿಗೆ ಭಲೇ ಅವಮಾನವೆನಿಸಿತು. ಈ ಬಿಳಿ ಕತ್ತೆ ಏರಿ ನಾನೂ ವ್ಯಾಪಾರ ಆರಂಭಿಸಲೇಬೇಕು. ಪೂಜಾರಿಕೆಯಲ್ಲಿ ಈಗೀಗ ಸುಖ, ಶಾಂತಿ, ನೆಮ್ಮದಿಯಿಲ್ಲವೆನಿಸಿದೆ! ಎಂದು ಯೋಚಿಸಿದ.

ಹೀಗಿರಲಾಗಿ- ಒಂದು ದಿನ ಕುಲ್ಡಪ್ಪ ಶೆಟ್ಟಿ ಎಂದಿನಂತೆ ಕತ್ತೆ ಏರಿ ರಾಂಪುರದ ಸಂತೆಗೆ ಹೊರಟಿದ್ದ. ದಾರಿಯಲ್ಲಿ ದಂಡಿನ ಬೇಲಿಯಲ್ಲಿ ಯಾರೋ ರೋಧಿಸುವ “ಅಯ್ಯೋ ಅಪ್ಪ, ಅಮ್ಮಾ ನನ್ನ ಕಾಪಾಡಿಽ..” ಎಂಬ ಕೂಗು ಕೇಳಿದ. ಅಲ್ಲೇ ಕತ್ತೆಯಿಂದ ಇಳಿದ ಅವನನ್ನು ಬಾಚಿ ಎತ್ತಿ ತಂದು ಕತ್ತೆ ಮೇಲೆ ಕೂಡಿಸಿ ತಾನು ಹಿಂದಿಂದೆ ನಡೆಯುತ್ತಾ ಸಾಗಿದ್ದ.

ತುಸು ದೂರ ಅಲ್ಲೇ ತುರುಕರ ಘೋರಿಗಳ ಬಳಿ ಹೋಗಿ “ಏ ಶೆಟ್ಟೀ ನಾನೇ ಮೃತ್ಯಂಜಯ! ನಿನಗಿನ್ನು ಗುರ್‍ತು ಸಿಗಲಿಲ್ಲವೇ? ಈ ಕತ್ತೆ-ಕತ್ತೆ ಮೇಲಿನ ಮುತ್ತು, ರತ್ನ, ವಜ್ರ, ವೈಡೂರ್ಯ… ಎಲ್ಲ ಈಗ ನನ್ನದು! ನಾನಿನ್ನು ಬರುತ್ತೇನೆ” ಎಂದು ಮೃತ್ಯುಂಜಯ ಕತ್ತೆಯನ್ನು ಜೋರಾಗಿ ಓಡಿಸಲು ಮುಂದಾದ.

“ಲೋ… ಮೃತ್ಯುಂಜಯ! ನೀ ಗಂಟೆ ಅಲ್ಲಾಡಿಸಿದಷ್ಟು ಜೋಲ್ಲು ಸುರಿಸಿ… ಹಸಿರು ಗೊಣ್ಣೆ ಬಿಟ್ಟಷ್ಟು… ಆರತಿ ತಟ್ಟೆ ಬೆಳಗಿದಷ್ಟು- ಗುಡಿಯ ಪೂಜಾರಿಕೆ ಮಾಡಿದಷ್ಟು ಸುಲಭವಲ್ಲ…! ಅದೂ ನನ್ನ ಕತ್ತೆ! ಅಷ್ಟು ಸಲೀಸಿಲ್ಲ ನೀ ಅದರ…. ಮೇಲೆ ಕುಳಿತು ಸವಾರಿ ಮಾಡುವುದು?? ಅದು ನನ್ನ ಕತ್ತೆ! ಅದೂ ಕುದುರೆಗೂ ಮಿಗಿಲು! ಅದೃಷ್ಟ ಲಕ್ಷ್ಮೀ…. ನಾ ಹೇಳಿದಂತೆ ಕೇಳುವುದು…. ಬೇಗ ಕೆಳಗಿಳಿ! ಇಲ್ಲವಾದರೆ… ಆಹಾಽ ನಿನಗೇ ಆಪತ್ತು!” ಎಂದು ಕುಲ್ಡಪ್ಪ ಶೆಟ್ಟಿ ಮೃತ್ಯುಂಜಯನಿಗೆ ಅಂದನಲ್ಲದೆ ಕತ್ತೆಯಂಗೇ ಒಂದು ಕೂಗು ಹಾಕಿದ! ಅಷ್ಟೇ ಸಾಕಾಯಿತು ಕತ್ತೆಗೇ….!

ಮೃತ್ಯುಂಜಯ ಉಢಾಳ- ದುಷ್ಠ- ಕ್ರೂರಿ-ಕೆಡುಕ-ಕುಡುಕ, ಕೆಟ್ಟ ಬುದ್ಧಿಯವ… ಕತ್ತೆಗೆ ಓಡಿಸಲು ಕೈಯಿಂದ ಜೋರಾಗಿಯೇ ಗುದ್ದಿದ. ಆ ಬಿಳಿ ಕತ್ತೆ ಓಡದೆ ಅವನನ್ನು ಕೆಳಕ್ಕೆ ಬೀಳಿಸಿ, ಕಾಲಿನಿಂದ ಜೋರಾಗಿ ಎರಡು ಮೂರು ಸಾರಿ ಒದೆಯಿತು. ಕಾಲುಗಳಿಂದ ತುಳಿಯಿತು, ಕೆನೆಯಿತು…. ಅವನನ್ನು ಹಣ್ಣುಗಾಯಿ ನೀರಾಯಿ ಮಾಡಿತು!

ಅಷ್ಟರಲ್ಲಿ ಕುಲ್ಡಪ್ಪ ಶೆಟ್ಟಿ ಓಡಿ ಬಂದು ಕತ್ತೆಯಿಂದ ಮೃತ್ಯುಂಜಯನನ್ನು ರಕ್ಷಿಸಿದ. ಅವನ ಬೆನ್ನು ಶಾಶ್ವತವಾಗಿ ಮುರಿದು ಹೋಗಿತ್ತು! ಹಲ್ಲುಗಳು ಉದುರಿ ಮೈ ಮನವೆಲ್ಲ ರಕ್ತಮಯವಾಗಿ ಹೋಗಿದ್ದವನನ್ನು ಆಸ್ಪತ್ರೆಗೆ ಸಾಗಿಸಿ, ಶೆಟ್ಟಿ ಪುಣ್ಯ ಕಟ್ಟಿಕೊಂಡ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...