Home / ಲೇಖನ / ಇತರೆ / ನಾ ಕಂಡ ಸಂಗೀತ ಕಾರಂಜಿ

ನಾ ಕಂಡ ಸಂಗೀತ ಕಾರಂಜಿ

ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿದೆ. ನಮ್ಮ ನೋವ ಮರೆಯಲಿಲ್ಲಿ ತಕ್ಕನಾಗಿದೆ.

ದಿನಾಂಕ ೦೮.೦೮.೨೦೧೫ ರಂದು ಶನಿವಾರದ ದಿನದಂದು ಜಗಮೋಹನ ಪ್ಯಾಲೇಸ್ ಸಭಾಭವನದಲ್ಲಿ ತಣ್ಣನೆಯ ಸಂಜೆಯಲಿ ರಾಷ್ಟ್ರೀಯ ಅಂತರರಾಷ್ಟ್ರೀಯ ಖ್ಯಾತಿ ವಿಖ್ಯಾತಿ ಪ್ರಖ್ಯಾತಿಯ ಗಾಯಕಿಯರಾದ ರಂಜನಿ ಹಾಗೂ ಗಾಯತ್ರಿ ಇವರ ಸಂಗೀತ ಕಾರಂಜಿಗೆ ಜನರು ಸುಜನರಲ್ಲಿ ಕಿಕ್ಕಿರಿದು ಸೇರಿತ್ತು.

ಕೊನೆಯ ಸೀಟಿನಲ್ಲಿದ್ದೆ! ಸಂಗೀತ ಇಂಪೆನಿಸಲಿಲ್ಲವೆಂದರೆ ಎದ್ದು ಹೋಗಲು ಎಂದು. ಆದರೆ… ಕೇಳುತ್ತಾ ಕೇಳುತ್ತಾ ಭಲೇ ರಸಾನುಭೂತಿ ಕಲಗಿತು!

“ಹೂವಿನಿಂದ ನಾರು ಸ್ವರ್ಗ ಸೇರಿತು” ಎನ್ನುವಂತೆ ನನ್ನ ಮಡದಿ ಮಣಿ ವೆಂಕಟಲಕ್ಷ್ಮಿಯಿಂದ ಒಳ್ಳೆಯ ಸಂಗೀತ ಕಾರಂಜಿಗೆ ಬಂದಿದ್ದೆ. ಮೈಸೂರು ಮೈಸೂರಿನ ಜನರೇ ಹಾಗೆ ಮೈಸೂರು ಮಲ್ಲಿಗೆಯಾ ಹಾಗೇ… ಕರ್ನಾಟಕ ಶಾಸ್ತ್ರೀಯ ಗಾಯನ ಜನರ ಮನಸ್ಸು ತಣಿಸಿತು.

ಸಂಗೀತವೇ ಹಾಗೆ ಗೊತ್ತಿಲ್ಲದವರ ತಲೆದೂಗುವಂತೆ ಮಾಡುವ ಮೋಡಿ ಅದಕ್ಕಿದೆ!

ಅಲ್ಲಿ ಆರಂಭ ಶೂರತ್ವವಿರಲಿಲ್ಲ. ಪ್ರತಿಭೆ, ಉತ್ಪತ್ತಿ, ಸಾಧನೆ, ಏನೆಲ್ಲ ಅಲ್ಲಿ ಮೇಳೈಸಿತ್ತು. ಅವರು ಸಂಗೀತ ಶಾರದೆಯರಂತೆ ಜನರ ಸೂರೇಗೊಂಡರು.

ಅಬ್ಬಾ! “ಶ್ರೀ ಮಹಾ ಗಣಪತಿಂ ಭಜೇಹಂ” ಎಂದು ನಮ್ಮ ಮೈಸೂರು ಮಹಾರಾಜರ ಹಾಡನ್ನು ಹಾಡಿದ ರೀತಿ ಎಲ್ಲರಿಗೆ ಮೆಚ್ಚಿಗೆಯಾಯಿತು. ನಂತರ “ಓಂ ನಮೋ ಭಗವತೇ ವಾಸುದೇವಾಯ”, “ಯಾರೆ ರಂಗನ ಯಾರೆ ಕೃಷ್ಣನ” ಮೈಸೂರು ವಾಸುದೇವಾಚಾರ್‍ಯರ “ಭಜನಸೇಯರಾದ” ಶ್ಯಾಮಾಶಾಸ್ತ್ರಿಗಳ “ನನ್ನುಯ್ರೋವು ಲಲಿತ” ತ್ಯಾಗರಾಜರ “ಇಂತ ಸೌಖ್ಯಮನಿ ನೇ…” ಮುತ್ತಯ್ಯ ಭಾಗವತರ “ಶರವಣ ಭವ ಸಮಯಮಿದಿರಾ” ಪುರಂದರದಾಸರ “ಆದದ್ದೆಲ್ಲ ಒಳಿತೇ ಆಯಿತು” “ನಾಚತೆ ಆಯ ನಟಿಕಟ್ಗಿರಿಧರ್” “ಎಂಥಾ ಪುಣ್ಯವೇ ಗೋಪಿ”, “ವಿಕೋಬ ಸಂಗ ಸದಾ” ಇವೆಲ್ಲ ಕೇಳುಗರ ಮನದಲ್ಲಿ ರಸಸ್ವಾದನೆಯನ್ನುಂಟು ಮಾಡಿದವು.

ಸಂಗೀತ ಅದರಲ್ಲೂ ಇಂಥಾ ಸಾಧಕಿಯರಾದ ಇಂಥಾ ಗಾಯಕಿಯರು ಕೇಳುಗರ ಮನವನ್ನು ಗೆಲ್ಲಬಲ್ಲವರೆಂಬುದಕ್ಕೆ ಅಲ್ಲಿ ಕಿಕ್ಕಿರಿದು ನಿಂತು ಕೆಳಗೆ ಹೊರಗೆ ಬಾಗಿಲಲ್ಲಿ ಗುಂಪುಗುಂಪು ಕೇಳುತ್ತಿತ್ತು. ಜನರು ತಲೆದೂಗಿ ಖುಷಿಖುಷಿಯಲ್ಲಿ ಚಪ್ಪಾಳೆ ಹೊಡೆಯುತ್ತಿತ್ತು.

ಎಂದರೋ ಮಹಾನುಭವರು ಉತ್ಕೃಷ್ಟ ಸ್ಥಾಯಿಯಲ್ಲಿ ಸುಲಲಿತ ಸುಮಧುರ ಸೌಖ್ಯ ಭಾವ ಪೂರ್‍ವ ಮನೋಜ್ಞವಾಗಿ ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಪಂಕ್ತಿಯಲಿ ಇವರ ಹೆಸರುಗಳು ಬಹುಕಾಲ ಉಳಿಯುವುವು ಎಂದು ಮನದುಂಬಿ ಬರೆದಿರುವೆ. ಆದ್ದರಿಂದ ಪುಟಾಣಿಗಳೆ… ನೀವೂ ಸಂಗೀತ ಕಲಿಯುವತ್ತ ಆಸಕ್ತಿಯುಳ್ಳವರಾಗಿ ಎಂದು ಹರಸುವೆ. ಆಗಬಹುದೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...