Home / ಲೇಖನ / ಇತರೆ / ನಾ ಕಂಡ ಸಂಗೀತ ಕಾರಂಜಿ

ನಾ ಕಂಡ ಸಂಗೀತ ಕಾರಂಜಿ

ನಾ ಮೊದಲು ಕಂಡಿದ್ದು- ಬೃಂದಾವನ ಗಾರ್ಡನ್‌ನ ಸಂಗೀತ ಕಾರಂಜಿಯನ್ನು ನಂತರ ಎದೆತುಂಬಿ ಹಾಡಿದೆನು… ಆ ನಂತರ ಗಣಪತಿ ಸಚ್ಚಿದಾನಂದ ಸ್ವಾಮಿ ಆಶ್ರಮದಲ್ಲಿ- ದಸರಾ ಗೋಷ್ಠಿಗಳಲ್ಲಿ ಅಬ್ಬಾ! ಮೈಸೂರಿನಲ್ಲಿ ಮನೆಮನೆಗಳಲ್ಲಿ ಸಂಗೀತ ಕಾರಂಜಿ ಹರಿಯುತ್ತಿದೆ. ನಮ್ಮ ನೋವ ಮರೆಯಲಿಲ್ಲಿ ತಕ್ಕನಾಗಿದೆ.

ದಿನಾಂಕ ೦೮.೦೮.೨೦೧೫ ರಂದು ಶನಿವಾರದ ದಿನದಂದು ಜಗಮೋಹನ ಪ್ಯಾಲೇಸ್ ಸಭಾಭವನದಲ್ಲಿ ತಣ್ಣನೆಯ ಸಂಜೆಯಲಿ ರಾಷ್ಟ್ರೀಯ ಅಂತರರಾಷ್ಟ್ರೀಯ ಖ್ಯಾತಿ ವಿಖ್ಯಾತಿ ಪ್ರಖ್ಯಾತಿಯ ಗಾಯಕಿಯರಾದ ರಂಜನಿ ಹಾಗೂ ಗಾಯತ್ರಿ ಇವರ ಸಂಗೀತ ಕಾರಂಜಿಗೆ ಜನರು ಸುಜನರಲ್ಲಿ ಕಿಕ್ಕಿರಿದು ಸೇರಿತ್ತು.

ಕೊನೆಯ ಸೀಟಿನಲ್ಲಿದ್ದೆ! ಸಂಗೀತ ಇಂಪೆನಿಸಲಿಲ್ಲವೆಂದರೆ ಎದ್ದು ಹೋಗಲು ಎಂದು. ಆದರೆ… ಕೇಳುತ್ತಾ ಕೇಳುತ್ತಾ ಭಲೇ ರಸಾನುಭೂತಿ ಕಲಗಿತು!

“ಹೂವಿನಿಂದ ನಾರು ಸ್ವರ್ಗ ಸೇರಿತು” ಎನ್ನುವಂತೆ ನನ್ನ ಮಡದಿ ಮಣಿ ವೆಂಕಟಲಕ್ಷ್ಮಿಯಿಂದ ಒಳ್ಳೆಯ ಸಂಗೀತ ಕಾರಂಜಿಗೆ ಬಂದಿದ್ದೆ. ಮೈಸೂರು ಮೈಸೂರಿನ ಜನರೇ ಹಾಗೆ ಮೈಸೂರು ಮಲ್ಲಿಗೆಯಾ ಹಾಗೇ… ಕರ್ನಾಟಕ ಶಾಸ್ತ್ರೀಯ ಗಾಯನ ಜನರ ಮನಸ್ಸು ತಣಿಸಿತು.

ಸಂಗೀತವೇ ಹಾಗೆ ಗೊತ್ತಿಲ್ಲದವರ ತಲೆದೂಗುವಂತೆ ಮಾಡುವ ಮೋಡಿ ಅದಕ್ಕಿದೆ!

ಅಲ್ಲಿ ಆರಂಭ ಶೂರತ್ವವಿರಲಿಲ್ಲ. ಪ್ರತಿಭೆ, ಉತ್ಪತ್ತಿ, ಸಾಧನೆ, ಏನೆಲ್ಲ ಅಲ್ಲಿ ಮೇಳೈಸಿತ್ತು. ಅವರು ಸಂಗೀತ ಶಾರದೆಯರಂತೆ ಜನರ ಸೂರೇಗೊಂಡರು.

ಅಬ್ಬಾ! “ಶ್ರೀ ಮಹಾ ಗಣಪತಿಂ ಭಜೇಹಂ” ಎಂದು ನಮ್ಮ ಮೈಸೂರು ಮಹಾರಾಜರ ಹಾಡನ್ನು ಹಾಡಿದ ರೀತಿ ಎಲ್ಲರಿಗೆ ಮೆಚ್ಚಿಗೆಯಾಯಿತು. ನಂತರ “ಓಂ ನಮೋ ಭಗವತೇ ವಾಸುದೇವಾಯ”, “ಯಾರೆ ರಂಗನ ಯಾರೆ ಕೃಷ್ಣನ” ಮೈಸೂರು ವಾಸುದೇವಾಚಾರ್‍ಯರ “ಭಜನಸೇಯರಾದ” ಶ್ಯಾಮಾಶಾಸ್ತ್ರಿಗಳ “ನನ್ನುಯ್ರೋವು ಲಲಿತ” ತ್ಯಾಗರಾಜರ “ಇಂತ ಸೌಖ್ಯಮನಿ ನೇ…” ಮುತ್ತಯ್ಯ ಭಾಗವತರ “ಶರವಣ ಭವ ಸಮಯಮಿದಿರಾ” ಪುರಂದರದಾಸರ “ಆದದ್ದೆಲ್ಲ ಒಳಿತೇ ಆಯಿತು” “ನಾಚತೆ ಆಯ ನಟಿಕಟ್ಗಿರಿಧರ್” “ಎಂಥಾ ಪುಣ್ಯವೇ ಗೋಪಿ”, “ವಿಕೋಬ ಸಂಗ ಸದಾ” ಇವೆಲ್ಲ ಕೇಳುಗರ ಮನದಲ್ಲಿ ರಸಸ್ವಾದನೆಯನ್ನುಂಟು ಮಾಡಿದವು.

ಸಂಗೀತ ಅದರಲ್ಲೂ ಇಂಥಾ ಸಾಧಕಿಯರಾದ ಇಂಥಾ ಗಾಯಕಿಯರು ಕೇಳುಗರ ಮನವನ್ನು ಗೆಲ್ಲಬಲ್ಲವರೆಂಬುದಕ್ಕೆ ಅಲ್ಲಿ ಕಿಕ್ಕಿರಿದು ನಿಂತು ಕೆಳಗೆ ಹೊರಗೆ ಬಾಗಿಲಲ್ಲಿ ಗುಂಪುಗುಂಪು ಕೇಳುತ್ತಿತ್ತು. ಜನರು ತಲೆದೂಗಿ ಖುಷಿಖುಷಿಯಲ್ಲಿ ಚಪ್ಪಾಳೆ ಹೊಡೆಯುತ್ತಿತ್ತು.

ಎಂದರೋ ಮಹಾನುಭವರು ಉತ್ಕೃಷ್ಟ ಸ್ಥಾಯಿಯಲ್ಲಿ ಸುಲಲಿತ ಸುಮಧುರ ಸೌಖ್ಯ ಭಾವ ಪೂರ್‍ವ ಮನೋಜ್ಞವಾಗಿ ಸುಶ್ರಾವ್ಯವಾಗಿ ಹಾಡಿದ್ದಾರೆ. ಅವರ ಪಂಕ್ತಿಯಲಿ ಇವರ ಹೆಸರುಗಳು ಬಹುಕಾಲ ಉಳಿಯುವುವು ಎಂದು ಮನದುಂಬಿ ಬರೆದಿರುವೆ. ಆದ್ದರಿಂದ ಪುಟಾಣಿಗಳೆ… ನೀವೂ ಸಂಗೀತ ಕಲಿಯುವತ್ತ ಆಸಕ್ತಿಯುಳ್ಳವರಾಗಿ ಎಂದು ಹರಸುವೆ. ಆಗಬಹುದೇ??
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...