ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂರ್‍ತಿ
Next post ಗಾಂಧಿ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…