Home / ಲೇಖನ / ವಿಜ್ಞಾನ / ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...