Home / ಲೇಖನ / ವಿಜ್ಞಾನ / ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...