ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೂರ್‍ತಿ
Next post ಗಾಂಧಿ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…