Home / ಲೇಖನ / ವಿಜ್ಞಾನ / ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಕ್ಯಾನ್ಸರ್‌ ನಿರೋಧಕ ಕಾಲಿಪ್ಲವರ್, ಕ್ಯಾಬೇಜ್

ಬಹಳಷ್ಟು ಜನ ಮೂತ್ರಕೋಶದ ಮತ್ತು ಕಂಡದ ಕ್ಯಾನ್ಯರಿಗೆ ತುತ್ತಾಗಿ ಬಳಲುತ್ತಿರುವುದನ್ನು ಕಾಣುತ್ತೇವೆ. ಇಂಥವರಿಗೆ ರಾಮಬಾಣವೆಂದರೆ ದಿನನಿತ್ಯದ ಆಹಾರದಲ್ಲಿ ಕಾಲಿಪ್ಲವರ್ ಮತ್ತು ಕ್ಯಾಬೇಜ್‌ಗಳನ್ನು ಹೆಚ್ಚಾಗಿ ಉಪಯೋಗಿಸಿದರೆ ಈ ಕಾಯಿಲೆಯಿಂದ ಗುಣವಾಗ ಬಹುದು ಎಂದು ಬರ್‍ಕ್ಲೆಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಅಭಿಪ್ರಾಯಪಡುತ್ತಾರೆ.

ಕಾಲಿಪ್ಲವರ್ ಮತ್ತು ಕ್ಯಾಬೆಜ್‌ಗಳಲ್ಲಿ ಇಂಡೋಲ್ (ಇಂಡೋಲ್-೩ ಕಾರ್ಬಿನೊಲ್) ಎಂಬ ರಾಸಾಯನಿಕವಿರುತ್ತದೆ. ಈ ರಾಸಾಯನಿಕಗಳು ಮಾನವನ ದೇಹದಲ್ಲಿ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತವೆ. ಈ ತರಕಾರಿಗಳನ್ನು ಸೇವಿಸಿದಾಗ ಅದರಲ್ಲಿರುವ ಇಂಡೋಲ್ ರಾಸಾಯನಿಕವು ದೇಹದಲ್ಲಿಡಿ ಇಂಡೋ ಲಿಮಿಥೇನ್ ಆಗಿ (DIM) ಪರಿವರ್ತನೆಗೊಳ್ಳುತ್ತದೆ. ಅನಂತರ ಅದು ಕ್ಯಾನ್ಸರ್ ಜೀವಕೋಶದ ಬೆಳವಣಿಗೆ ವಿರುದ್ದ ಆಕ್ರಮಣ ಆರಂಭಿಸುತ್ತದೆ. ದೇಹದಲ್ಲಿ ಆಂಡ್ರೋಜನ್ ಎಂಬ ಹಾರ್ಮೋನಿನ ಶ್ರಾವ ಅಧಿಕವಾಗಿ ಅದರ ಚಟುವಟಿಕೆ ತೀವ್ರವಾದರೆ ಅದು ಮೂತ್ರಕೋಶದ ಕಂಠದ ಗ್ರಂಥಿಯ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಗೆ ನೆರವಾಗುತ್ತದೆ. ಕಾಲಿಪ್ಲವರ್ ಮತ್ತು ಕ್ಯಾಬೆಜ್ ದಲ್ಲಿರುವ ರಾಸಾಯನಿಕ ಡಿ ಇಂಡೋಲಿಮಿಥೆನ್ ಆಂಡ್ರೋಜೆನನ ಚಟುವಟಿಕೆಯನ್ನು ಪ್ರತಿಬಂಧಿಸುತ್ತದೆ. ಡಿ ಇಂಡೋಲಿಥೇನ್ ರಾಸಾಯನಿಕದ ಆಕ್ರಮಣ ಕ್ಯಾನ್ಸರ್ ಜೀವಕೋಶಗಳ ಬೆಳವಣಿಗೆಯನ್ನು ಶೇ. ೭೦ ರಷ್ಟು ಕಡಿಮೆ ಮಾಡುತ್ತದೆ. ಎಂದು ಬಯಾಲಾಜಿಕಲ್‌ಕೆಮಿಸ್ಟ್ರಿ ಪತ್ರಿಕೆಯ ಈಚಿನ ಸಂಚಿಕೆಯೊಂದರಲ್ಲಿ ಪ್ರಕಟವಾಗಿದೆ. ಇಂಡೋಲ್ ರಾಸಾಯನಿಕವು ಹೃದಯಾಘಾತವನ್ನು ತಡೆಗಟ್ಟಲು ನೆರವಾಗುತ್ತದೆ ಎಂದು ಇದೇ ಸಂಶೋಧಕರು ಹೇಳುತ್ತಾರೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...