Home / ಲೇಖನ / ವಿಜ್ಞಾನ / ಕತ್ತಲಲ್ಲೂ ಹೊಳೆಯುವ ಬಟ್ಟೆ

ಕತ್ತಲಲ್ಲೂ ಹೊಳೆಯುವ ಬಟ್ಟೆ

ಕತ್ತಲಲ್ಲಿ ವಾಹನಗಳ ಬರುವಿಕೆಯನ್ನು ಅವುಗಳ ಹೆಡ್ ಲೈಟ್‌ಗಳಿಂದ ಪತ್ತೆ ಹಚ್ಚಬಹುದು. ದಾರಿಯಲ್ಲಿಯ ಕೈಮರ, ಸೂಚನಾ ಫಲಕಗಳಿಗೆ ಬೆಳಕು ಬಿದ್ದಾಗ ಅದರಲ್ಲಿಯ ರಂಜಕದ ಅಂಶದಿಂದ ಅಲ್ಲಿಯ ಅಕ್ಷರಗಳು ಹೊಳೆಯುತ್ತವೆ. ರಾತ್ರಿಯಲ್ಲಿ ಬೆಕ್ಕೂ, ಹುಲಿಗಳು ತಿರುಗಾಡಿದರೂ ಅವುಗಳ ಕಣ್ಣುಗಳು ಸಹ ಹೊಳೆಯುತ್ತವೆ. ಆದರೆ ಮನುಷ್ಯರು ಧರಿಸಿದ ಬಟ್ಟೆಗಳು ರಾತ್ರಿಯಲ್ಲಿ ಹೊಳೆಯುತ್ತವೆ, ಎಂದರೆ ಸೋಜಿಗ ಅಲ್ಲವೆ? ಇಂಥಹ ಶರ್ಟ್‌ಗಳನ್ನು ಜಪಾನ್ ದೇಶ ಕಂಡುಹಿಡಿದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದೆ. ಕತ್ತಲಾದಂತೆಲ್ಲ ತಮ್ಮ ಕಾಂತಿಯಿಂದ ಎದುರಿಗೆ ಬರುವವರಿಗೆ ಒಬ್ಬ ವ್ಯಕ್ತಿ ಬರುತ್ತಿದ್ದಾನೆ ದಾರಿಬಿಡಬೇಕೆಂದು ತಿಳಿಯುತ್ತದೆ. ಇಂಥಹಬಟ್ಟೆಗಳನ್ನು ದೇಹದ ಮೇಲೆ ಸುಲಭವಾಗಿ ಧರಿಸಬಹುದು. ಇದು ಬೆಳಕಿನಲ್ಲಿ ಸಾಧಾರಣವಿರುತ್ತದೆ, ಆದರೆ ರಾತ್ರಿಯಾಯಿತೆಂದರೆ ಹೊಳೆಯಲಾರಂಭಿಸುತ್ತದೆ. ಈ ಬಟ್ಟೆಯಲ್ಲಿ ಮನೆಯಲ್ಲಿಯ ಪ್ರಮುಖ ವಸ್ತುಗಳನ್ನು ಸುತ್ತಿಟ್ಟರೆ ಅದು ಹೊಳೆದು ಅದರ ಸ್ಥಳವಮ್ನ ಗುರುತಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...