ರಾಮರಾಜ್ಯ

ಕನಸು ಕಾಣುತ್ತಿದ್ದೇವೆ
ಮುಂಬರುವ ದಿನಗಳಿಗಾಗಿ
ಆಸೆ ಭರವಸೆಯ ಹೊರೆ ಹೊತ್ತು
ತುಡಿಯುತಿದೆ ಜೀವ
ಮಿಡಿಯುತಿದೆ ಜೀವ
ಕಾತರಿಸುತಲಿವೆ ಕಂಗಳು
ಬರುವ ನಾಳೆಗಳಿಗಾಗಿ
ಎಂದು ಬರುವುದೋ ರಾಮರಾಜ್ಯ
ಅಳಿಸಿ ರಾವಣರ ಸಾಮ್ರಾಜ್ಯ
ಹಿಂದೆ ಇತ್ತಂತೆ ಸುಂದರ ಸುಭಿಕ್ಷಕಾಲ
ಈಗೆಲ್ಲಾ ಕರಾಳ ಮೋಸ ವಂಚನೆಯ ಕಾಲ
ಮುತ್ತುರತ್ನವ ಬಳ್ಳದಲಿ ಮಾರುತ್ತಿದ್ದರಂತೆ
ಇದೇನು ನಿಜವೋ ಅಡುಗೂಲಜ್ಜಿ ಕಥೆಯೋ
ನಂಬುವುದಾದರೂ ಹೇಗೆ
ಮಾನವನ್ನ ಮಾನವನೇ
ಕಿತ್ತು ತಿನ್ನುತ್ತಿರುವಾಗ
ಪಾರಿವಾಳಕೆ ದೇಹವ ಒಪ್ಪಿಸಿದ
ಶಿಬಿ ಚಕ್ರವರ್‍ತಿಯ ತ್ಯಾಗ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ನೀನು ನಾನು
Next post ಸುಂದರ ತಂಗಿ

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…