ತ್ರಿಶಂಕು ಸ್ಥಿತಿ

ಮುಗಿಲೆತ್ತರ ಏರುವ
ಹಾರುವ ತೇಲಾಡುವ
ಬಯಕೆ ಬಲಿತು ಹೆಮ್ಮರ
ಕಡಿದಾದ ದಾರಿ ಬಲುದೂರ.
ಕಾಣದ ತೀರ
ಗುರಿ ಸೇರುವ ಕಾತುರ
ಹುಚ್ಚು ಮನಸ್ಸಿಗಿಲ್ಲ ಕಡಿವಾಣ
ಪುಂಖಾನುಪುಂಖ ನಿರಾಸೆಯ ಬಾಣ
ಆಸೆಗಳು ಆಗಸದಷ್ಟು
ಕನಸುಗಳು ಕಡಲಿನಷ್ಟು
ನನಸಾಗದೆ ಉಳಿಯುವುದೇ ಹೆಚ್ಚು
ಭೋರ್‍ಗರೆಯುವ ಪ್ರವಾಹದೆದುರು
ಸೆಣಸಿ ಮುನ್ನುಗ್ಗುವ ಹುಚ್ಚು
ಮುಂದೆ ಸಾಗುವವರ ಹಿಂದೆ ತಳ್ಳಿ
ಮುನ್ನಡೆಯುವ ಕೆಚ್ಚು.
ಏರಬಹುದು ಮೇಲೇರಬಹುದು
ಏರಿದ ಮೇಲೇ
ಭಯ ಆತಂಕದ ನೋಟ
ಅಸ್ತಿತ್ವಕ್ಕಾಗಿ ಹೋರಾಟ
ಮೇಲೇರಿದರೆ ಹದ್ದುಗಳ ಕಾಟ
ಕೆಳಗಿಳಿದರೆ ಹಾವುಗಳ ಚೀರಾಟ
ಅತ್ತಲೂ ಇಲ್ಲದೆ ಇತ್ತಲೂ ಸಲ್ಲದೆ
ನಡುವೆ ತ್ರಿಶಂಕುವಿನ ಸ್ಥಿತಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಹೀಗೆ ಸಂತೋಷ
Next post ಕೂಡಲೇ

ಸಣ್ಣ ಕತೆ

  • ರಾಜಕೀಯ ಮುಖಂಡರು

    ಪ್ರಕರಣ ೧೦ ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…