ಜೀವನದ ಮುಸ್ಸಂಜೆಯಲಿ
ಜವಾಬ್ದಾರಿಗಳೆಲ್ಲವ ಕಳೆದು
ನಾವೇ ನಾವಾಗಿರಬೇಕೆಂದು
ನಾವೇ ಕಟ್ಟಿದ ಗೂಡಲ್ಲಿ ನೆಲೆಯೂರಿದಾಗ
ನಮ್ಮನ್ನು ನಾವು ಕಳಕೊಂಡಿದ್ದೆವು.
ಎದುರಿಗಿದ್ದ ಮರುಭೂಮಿಯಲಿ
ಹುಡುಕಹೊರಟಾಗ ಸಿಕ್ಕಿದ್ದೆಲ್ಲ ಬರೆ ಮರುಳು!
ಪ್ರೀತಿಯ ಹಸಿರಿರಲಿಲ್ಲ
ಒಲವಿನ ಹೂವಿರಲಿಲ್ಲ
ಅರಿವಿನ ಸಿಂಚನವಿರಲಿಲ್ಲ
ದುಡಿಮೆಯ ಹೋರಾಟದಲ್ಲಿ ಸರಿದಾಗಿತ್ತು
ನಾನೊಂದು ಕಡೆ ಅವನೊಂದು ಕಡೆ.
ಸಮಾನಾಂತರ ರೇಖೆಗಳಂತೆ!
ಬರೇ ಒಂದು ನೂಲೆಳೆಯ ಅಂತರ
ಆದರೆ ಒಂದಕ್ಕೊಂದು ಸೇರಲಾಗದ ದೂರ.
ಹೇಗಾಯ್ತು ಹೀಗೆ ಹತ್ತಿರವಿದ್ದರೂ ದೂರ?
ಒಸರುವುದೇ ಮರುಭೂಮಿಯಲ್ಲಿ ಒಯಸಿಸ್
ಉಕ್ಕಿ ಹರಿಯುವುದೇ ಪ್ರೀತಿ?
ಕೂಡುವವೇ ಸಮಾನಾಂತರ ರೇಖೆಗಳು
ಎಂದಾದರೂ ಒಂದು ದಿನ?
*****
Related Post
ಸಣ್ಣ ಕತೆ
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಕರೀಮನ ಪಿಟೀಲು
ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…