Home / ಕವನ / ಕವಿತೆ / ಕಾಣೆಯಾಗಿವೆ

ಕಾಣೆಯಾಗಿವೆ

ಮನೆಯ ತುಂಬ ಹಾರಿಕೊಂಡು
ಅಡುಗೆ ಮನೆಗೆ ನುಗ್ಗಿಕೊಂಡು
ಅಂಗಳದಲ್ಲಿ ನಲಿದುಕೊಂಡು
ನಮ್ಮ ನೋಡಿ ಹೆದರಿಕೊಂಡು
ಬುರ್ರೆಂದು ಹಾರಿ ಹೋಗಿ
ಮತ್ತೆ ಮತ್ತೆ ಇಣುಕುತ್ತಿದ್ದ
ಚಿಲಿಪಿಲಿ ಹಾಡಿಕೊಂಡು
ಮಕ್ಕಳಿಗೆ ಕುಶಿ ಕೊಡುತ್ತಿದ್ದ
ಗುಬ್ಬಚ್ಚಿಗಳೆಲ್ಲಿ ಕಾಣೆಯಾದುವು?

ಅಕ್ಕಿ ಬೇಳೆ ಕೇರುವಾಗ
ದೂರ ನಿಂತು ಹೆಕ್ಕುತ್ತಿದ್ದ
ಮನುಷ್ಯರಿಂದ ದೂರವಿದ್ದು
ಮಡಿಧರ್‍ಮ ಪಾಲಿಸುತ್ತಿದ್ದ
ಪುಟ್ಟ ಪುಟ್ಟ ಹೂವಿನಂತಹ
ಗುಬ್ಬಚ್ಚಿಗಳೆಲ್ಲಿ ಮಾಯವಾದವು?

ಪುಟ್ಟ ಗೂಡು ಕಟ್ಟಲೆಂದು
ಕಸಕಡ್ಡಿ ನಾರುಗೀರು ಹೆಕ್ಕಿ ತಂದು
ಅಲ್ಲಿ ಇಲ್ಲಿ ಕದ್ದು ಮುಚ್ಚಿ ಇಟ್ಟುಕೊಂಡು
ಗೂಡ ನೈದು ತೊಲೆಯ ಮೇಲೆ ನೇತು ಬಿಡುವ
ಗುಬ್ಬಚ್ಚಿಗಳೆಲ್ಲಿ ಓಡಿಹೋದವು?

ಮೂರ್ತಿ ಚಿಕ್ಕದು ಬುದ್ದಿ ದೊಡ್ಡದು
ಪ್ಲಾನು ಇಲ್ಲ ಶಿಲ್ಪ ಶಾಸ್ತ್ರವಿಲ್ಲ
ಕಟ್ಟುವ ಗೂಡಿಗೆ ಬಿರುಕು ಇಲ್ಲ.
ಕೊಕ್ಕಿನಿಂದ ಗೂಡ ಹೆಣೆದು
ತುಂಬು ಸಂಸಾರ ಹೂಡುವ ದೊಡ್ಡ ಮನದ
ಗುಬ್ಬಚ್ಚಿಗಳೇಕೆ ಇಲ್ಲವಾದುವು?

ಅಕ್ಕಿ ಕಾಳು ಕೇರದಿರುವ
ಕಿಟಕಿಬಾಗಿಲುಗಳೆಲ್ಲವ ಮುಚ್ಚಿ
ಒಳಗೆ ಕುಳಿತು ಸೊರಗುತ್ತಿರುವ
ಮಾನವತೆಯ ಮರೆಯುತ್ತಿರುವ
ಮನುಜ ಕುಲವ ಕಂಡು ಹೇಸಿ
ನಾಡ ಬಿಟ್ಟು ಹಾರಿ ಹೋದುವೇನು
ಆ ಪುಟ್ಟ ಪುಟ್ಟ ಮುದ್ದು ಹಕ್ಕಿಗಳು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...