Home / ಕವನ / ಕವಿತೆ / ಗಣಪತಿಯ ಸ್ತೋತ್ರ

ಗಣಪತಿಯ ಸ್ತೋತ್ರ

ಗಂಧ ಕಸ್ತುರಿ ಪುನಗಽ |
ಗೌರವ್ವನ | ಕಂದಗ ಧರಿಸಿದರಽ |
ಅಂದದ ಬಿಳಿ‌ಎಲಿ ಆಡಕಿ ಕಾಚವು ಸುಣ್ಣ |
ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧||

ರಾಜಾನ್ನ ಕೆನೆಮಸರಽ |
ರುಚಿಗಾಯಿ | ಭೋಜನಕ ಸವಿಮಜ್ಜಿಗೆಽ |
ಸಾಜನಾಗಿ ಬಂದು ಸೆಳೆಮಂಚದಲಿ ಕುಳಿತು |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೨||

ಹಣ್ಣ ಹಪ್ಪಳ ಶೆಂಡಿಽಗಿ |
ಎಳಸಾದ | ಸಣ್ಣ ಶಾವಿಗಿ ಬಸೆದಽ |
ಉಂಡ ಮಗಿ ನೊರೆಹಾಲ ಉದರ-ಸಕ್ಕರಿ ತುಪ್ಪ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೩||

ಚಿಗುಳಿ ಚಿನ್ಪಾಲ್ ಬಚ್ಚೇವಽ |
ಚಿಟುಬಾಳಿ | ಅಗಲೋಳು ಗರಿಕಾಣೆನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೪||

ಸುರ ಹರಿ ನಮ ದೇವರ ಕಾಳಿಽ |
ಧೊರಿಪೂಜಿ | ಧೊರಿಪೂಜಿ ಮಾಽಡುನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೫||
*****

ಈ ಹಾಡಿನ ಮೊದಲನೆಯ ನುಡಿಯಲ್ಲಿ ಪೂಜೆಯ ಪರಿಯೂ ಮುಂದಿನ ಮೂರು ನುಡಿಗಳಲ್ಲಿ ನೈವೇದ್ಯದ ವಿಸ್ತಾರವೂ ವರ್ಣಿಸಲ್ಪಟ್ಟಿವೆ. ಕೊನೆಯ ನುಡಿಯು ಸಾಂಪ್ರದಾಯಿಕವಾಗಿದೆ.

ಛಂದಸ್ಸು: ಐದೈದು ಮಾತ್ರೆಯ ಗಣಗಳಿವೆ. ಮೊದಲನೆಯ ನುಡಿಯಲ್ಲಿ ಒಂದು ಡೊಡ್ಡ ಚರಣವು ಹೆಚ್ಚಿಗೆ ಬಿದ್ದಿದೆ.

ಶಬ್ದ ಪ್ರಯೋಗಗಳು: ಸಾಜ=ಶೃಂಗಾರ. ಸೆಳೆಮಂಚ=ತೂಗುಮಣೆ. ಸೋಬಸ್ತ=ಶೋಭಿಸುತ್ತ. ಏರಸ್ತ=ಏರಿಸುತ್ತೇನೆ. ಧೊರಿಪೂಜಿ=ವೈಭವದ ಪೂಜೆ. ಸೆಂಡೆಗಿ, ಹೆಪ್ಪಳ, ಶಾಂವಗಿ, ಚಿಗುಳಿ ಇವು ಭೋಜನದ ಪದಾರ್ಥಗಳು. ಚಿನ್ಪಾಲ್‌ ಮತ್ತು ಬಚ್ಚೇವ ಎಂಬವುಗಳೂ ಅವೇ. ಆದರೆ ಇವೆರಡರ ಸರಿಯಾದ ಕಲ್ಪನೆ ಮಾತ್ರ ಬರುವಂತಿಲ್ಲ.

“ಚಿಟುಬಾಳಿ ಅಗಲೋಳು ಗರಿ ಕಾಣೆನ” ಎಂದರೆ ಕಿರಿಬಾಳಿಯ ಎಲೆಯ ಮೇಲೆ ಎಡೆಬಡಿಸಿದ ಸಾಮಗ್ರಿಗಳು, ಎಲೆಯ ನಡುವಿನ ಗರಿ ಕಾಣದಷ್ಟು ತುಂಬಿದ್ದನೆಂದು ಅರ್‍ಥ.

ಈ ಹಾಡು ಪಾಂಚಾಲ ಜಾತಿಯವರಲ್ಲಿ ಪ್ರಚಾರವುಳ್ಳದ್ದಾಗಿರುವುದರಿಂದ ಅವರ ಆರಾಧ್ಯದೈವತವಾದ ಕಾಲೀದೇವಿಯ ಉಲ್ಲೇಖವು ಕೊನೆಯ ನುಡಿಯಲ್ಲಿದೆ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...