ಗಣಪತಿಯ ಸ್ತೋತ್ರ

ಗಂಧ ಕಸ್ತುರಿ ಪುನಗಽ |
ಗೌರವ್ವನ | ಕಂದಗ ಧರಿಸಿದರಽ |
ಅಂದದ ಬಿಳಿ‌ಎಲಿ ಆಡಕಿ ಕಾಚವು ಸುಣ್ಣ |
ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧||

ರಾಜಾನ್ನ ಕೆನೆಮಸರಽ |
ರುಚಿಗಾಯಿ | ಭೋಜನಕ ಸವಿಮಜ್ಜಿಗೆಽ |
ಸಾಜನಾಗಿ ಬಂದು ಸೆಳೆಮಂಚದಲಿ ಕುಳಿತು |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೨||

ಹಣ್ಣ ಹಪ್ಪಳ ಶೆಂಡಿಽಗಿ |
ಎಳಸಾದ | ಸಣ್ಣ ಶಾವಿಗಿ ಬಸೆದಽ |
ಉಂಡ ಮಗಿ ನೊರೆಹಾಲ ಉದರ-ಸಕ್ಕರಿ ತುಪ್ಪ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೩||

ಚಿಗುಳಿ ಚಿನ್ಪಾಲ್ ಬಚ್ಚೇವಽ |
ಚಿಟುಬಾಳಿ | ಅಗಲೋಳು ಗರಿಕಾಣೆನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೪||

ಸುರ ಹರಿ ನಮ ದೇವರ ಕಾಳಿಽ |
ಧೊರಿಪೂಜಿ | ಧೊರಿಪೂಜಿ ಮಾಽಡುನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೫||
*****

ಈ ಹಾಡಿನ ಮೊದಲನೆಯ ನುಡಿಯಲ್ಲಿ ಪೂಜೆಯ ಪರಿಯೂ ಮುಂದಿನ ಮೂರು ನುಡಿಗಳಲ್ಲಿ ನೈವೇದ್ಯದ ವಿಸ್ತಾರವೂ ವರ್ಣಿಸಲ್ಪಟ್ಟಿವೆ. ಕೊನೆಯ ನುಡಿಯು ಸಾಂಪ್ರದಾಯಿಕವಾಗಿದೆ.

ಛಂದಸ್ಸು: ಐದೈದು ಮಾತ್ರೆಯ ಗಣಗಳಿವೆ. ಮೊದಲನೆಯ ನುಡಿಯಲ್ಲಿ ಒಂದು ಡೊಡ್ಡ ಚರಣವು ಹೆಚ್ಚಿಗೆ ಬಿದ್ದಿದೆ.

ಶಬ್ದ ಪ್ರಯೋಗಗಳು: ಸಾಜ=ಶೃಂಗಾರ. ಸೆಳೆಮಂಚ=ತೂಗುಮಣೆ. ಸೋಬಸ್ತ=ಶೋಭಿಸುತ್ತ. ಏರಸ್ತ=ಏರಿಸುತ್ತೇನೆ. ಧೊರಿಪೂಜಿ=ವೈಭವದ ಪೂಜೆ. ಸೆಂಡೆಗಿ, ಹೆಪ್ಪಳ, ಶಾಂವಗಿ, ಚಿಗುಳಿ ಇವು ಭೋಜನದ ಪದಾರ್ಥಗಳು. ಚಿನ್ಪಾಲ್‌ ಮತ್ತು ಬಚ್ಚೇವ ಎಂಬವುಗಳೂ ಅವೇ. ಆದರೆ ಇವೆರಡರ ಸರಿಯಾದ ಕಲ್ಪನೆ ಮಾತ್ರ ಬರುವಂತಿಲ್ಲ.

“ಚಿಟುಬಾಳಿ ಅಗಲೋಳು ಗರಿ ಕಾಣೆನ” ಎಂದರೆ ಕಿರಿಬಾಳಿಯ ಎಲೆಯ ಮೇಲೆ ಎಡೆಬಡಿಸಿದ ಸಾಮಗ್ರಿಗಳು, ಎಲೆಯ ನಡುವಿನ ಗರಿ ಕಾಣದಷ್ಟು ತುಂಬಿದ್ದನೆಂದು ಅರ್‍ಥ.

ಈ ಹಾಡು ಪಾಂಚಾಲ ಜಾತಿಯವರಲ್ಲಿ ಪ್ರಚಾರವುಳ್ಳದ್ದಾಗಿರುವುದರಿಂದ ಅವರ ಆರಾಧ್ಯದೈವತವಾದ ಕಾಲೀದೇವಿಯ ಉಲ್ಲೇಖವು ಕೊನೆಯ ನುಡಿಯಲ್ಲಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾಡದಿದ್ದರೆ ಮುನೇಶ್ವರ
Next post ನಾ ಕಂಡ ಕವಿ ಹೃದಯಿ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…