Home / ಕವನ / ಕವಿತೆ / ಗಣಪತಿಯ ಸ್ತೋತ್ರ

ಗಣಪತಿಯ ಸ್ತೋತ್ರ

ಗಂಧ ಕಸ್ತುರಿ ಪುನಗಽ |
ಗೌರವ್ವನ | ಕಂದಗ ಧರಿಸಿದರಽ |
ಅಂದದ ಬಿಳಿ‌ಎಲಿ ಆಡಕಿ ಕಾಚವು ಸುಣ್ಣ |
ಮುಂದ ಮಡೆಚಿನಿಟ್ಟು ಮಲ್ಲಿಽಗಿ ಮಳೆಗರೆದ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೧||

ರಾಜಾನ್ನ ಕೆನೆಮಸರಽ |
ರುಚಿಗಾಯಿ | ಭೋಜನಕ ಸವಿಮಜ್ಜಿಗೆಽ |
ಸಾಜನಾಗಿ ಬಂದು ಸೆಳೆಮಂಚದಲಿ ಕುಳಿತು |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೨||

ಹಣ್ಣ ಹಪ್ಪಳ ಶೆಂಡಿಽಗಿ |
ಎಳಸಾದ | ಸಣ್ಣ ಶಾವಿಗಿ ಬಸೆದಽ |
ಉಂಡ ಮಗಿ ನೊರೆಹಾಲ ಉದರ-ಸಕ್ಕರಿ ತುಪ್ಪ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೩||

ಚಿಗುಳಿ ಚಿನ್ಪಾಲ್ ಬಚ್ಚೇವಽ |
ಚಿಟುಬಾಳಿ | ಅಗಲೋಳು ಗರಿಕಾಣೆನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೪||

ಸುರ ಹರಿ ನಮ ದೇವರ ಕಾಳಿಽ |
ಧೊರಿಪೂಜಿ | ಧೊರಿಪೂಜಿ ಮಾಽಡುನಽ |
ಪರಿಪರಿ ಸೋಬಸ್ತ ಪರಿಮಽಳನೇರಸ್ತ |
ಮತಿಯ ಪಾಲಿಸೊ ಎನಗಽ |
ಶ್ರೀಗಣರಾಯಾ | ಸ್ತುತಿಮಾಡಿ ಉಣಿಸುಽವೆನೊ ||೫||
*****

ಈ ಹಾಡಿನ ಮೊದಲನೆಯ ನುಡಿಯಲ್ಲಿ ಪೂಜೆಯ ಪರಿಯೂ ಮುಂದಿನ ಮೂರು ನುಡಿಗಳಲ್ಲಿ ನೈವೇದ್ಯದ ವಿಸ್ತಾರವೂ ವರ್ಣಿಸಲ್ಪಟ್ಟಿವೆ. ಕೊನೆಯ ನುಡಿಯು ಸಾಂಪ್ರದಾಯಿಕವಾಗಿದೆ.

ಛಂದಸ್ಸು: ಐದೈದು ಮಾತ್ರೆಯ ಗಣಗಳಿವೆ. ಮೊದಲನೆಯ ನುಡಿಯಲ್ಲಿ ಒಂದು ಡೊಡ್ಡ ಚರಣವು ಹೆಚ್ಚಿಗೆ ಬಿದ್ದಿದೆ.

ಶಬ್ದ ಪ್ರಯೋಗಗಳು: ಸಾಜ=ಶೃಂಗಾರ. ಸೆಳೆಮಂಚ=ತೂಗುಮಣೆ. ಸೋಬಸ್ತ=ಶೋಭಿಸುತ್ತ. ಏರಸ್ತ=ಏರಿಸುತ್ತೇನೆ. ಧೊರಿಪೂಜಿ=ವೈಭವದ ಪೂಜೆ. ಸೆಂಡೆಗಿ, ಹೆಪ್ಪಳ, ಶಾಂವಗಿ, ಚಿಗುಳಿ ಇವು ಭೋಜನದ ಪದಾರ್ಥಗಳು. ಚಿನ್ಪಾಲ್‌ ಮತ್ತು ಬಚ್ಚೇವ ಎಂಬವುಗಳೂ ಅವೇ. ಆದರೆ ಇವೆರಡರ ಸರಿಯಾದ ಕಲ್ಪನೆ ಮಾತ್ರ ಬರುವಂತಿಲ್ಲ.

“ಚಿಟುಬಾಳಿ ಅಗಲೋಳು ಗರಿ ಕಾಣೆನ” ಎಂದರೆ ಕಿರಿಬಾಳಿಯ ಎಲೆಯ ಮೇಲೆ ಎಡೆಬಡಿಸಿದ ಸಾಮಗ್ರಿಗಳು, ಎಲೆಯ ನಡುವಿನ ಗರಿ ಕಾಣದಷ್ಟು ತುಂಬಿದ್ದನೆಂದು ಅರ್‍ಥ.

ಈ ಹಾಡು ಪಾಂಚಾಲ ಜಾತಿಯವರಲ್ಲಿ ಪ್ರಚಾರವುಳ್ಳದ್ದಾಗಿರುವುದರಿಂದ ಅವರ ಆರಾಧ್ಯದೈವತವಾದ ಕಾಲೀದೇವಿಯ ಉಲ್ಲೇಖವು ಕೊನೆಯ ನುಡಿಯಲ್ಲಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...