Home / ಕವನ / ಕವಿತೆ / ಎಡವೂರ ವೀರಭದ್ರನ ಸ್ತೋತ್ರ

ಎಡವೂರ ವೀರಭದ್ರನ ಸ್ತೋತ್ರ

ಎಡವೂರ ತಳದಲ್ಲಿ ಏನೇನ ಶಡಗರ
ಎಡಕ ನಂದೀಕೋಲ ಬಲಕ ಪಲ್ಲಕಿ ಪಂಕ
ಶಡಗರದ ಛತ್ತರಕಿ ಎಡಬಲ ಬತಾಗೀರಿ
ಹಾರೂವ ಹೂಬಾಣ ಹೊಬತ್ತಿ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೧||

ಹಣಿಯ ಮ್ಯಾಲಿನ ಗಂಧ ಗಿಣಿರಾಮ ಕುಂತಂಗ
ಕರಿಯ ಕುಂದಲದ್ಹರಳ ಕಿವಿಯಾಗ ಇಟ್ಟಾನ
ಏಸೊಂದು ಶೃಂಗಾರ ಎಡಗೈಲಿ ಹಿಡದಾನ
ಪರವೂತ ಗಿರಿಗುಡ್ಡ ಬಲಗೈಲಿ ಹಿಡದಾನ
ಚಳ್ಳುಂಗ್ರ ಚಿಮ್ಮೂತ ಕ್ವಾರ್‍ಮೀಸಿ ತಿದ್ದೂತ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೨||

ಬಿಳಿಯಂಗಿ ತೊಟ್ಟಾನ ಬಿಗದುಟ್ಟು ನಿಂತಾನ
ಸರಗಂಟಿ ಸರಮಾಲಿ ಕೊರಳೀಗಿ ಹಾಕ್ಯಾನ
ಏಸೊಂದು ರುದ್ರಾಕ್ಷಿ ಸ್ವಾಮಿ ತಾ ಧರಸ್ಯಾನ
ಪಡವಽಲ ದಿಕ್ಕಿಽಗಿ ಒಡೆಯ ತಾ ನೆನೆದಾನ
ತುಂಗಬದ್ರಿ ಕಾಳಿ ಬಾಗಿಽಲ ತೆರೆಯಂದ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೩||

ಮಂಗಳಾರಽ ದಿನ ವೀರ ನಿನ್ನೋಲಗೆ
ಚಿಟ್ಟಿ ಚಿಣಗೀ ಹೂವ ದುಂಡಮಲ್ಲಿಗಿ ಹೂವ
ಕೊಂಡಾಡೊ ದಾಸ್ಯಾಳ ಮಂಡ್ಲೇಸೂರದ್ಹೂವ
ಏಳ ಸಮದುರದಾನ ಪಾರಿಽಜಾತದ ಹೂವ
ಕಂಚಿಽಯ ಈ ಮಗ್ಗಿ ಕಮಳದ ಈ ಮಗ್ಗಿ
ಖ್ಯಾದಿಽಗಿ ಹೊಡಿ ನೂರು ಖ್ಯಾದಿಽಗಿ ಗರಿ ನೂರು
ಎಲ್ಲಽಕ ಹೆಚ್ಚಿಂದು ಬೆಲ್ಲಪತ್ತುರಿ ನೂರು
ಕರಕಿಽಯ ಪತ್ತೂಽರಿ ಕರಿಯ ತುಂಬೀ ಹೂವ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮುಂಗಳಽ ನಿತ್ಯ ಶಿನಮಂಗಳ ||೪||

ಹೆಗ್ಗಾಳಿ ಚಿನಕಾಳಿ ದೊಡ್ಡ ರಂಗಿನ ಕಾಳಿ
ಊದುಽಸು ನೆಽಪೇರಿ ಬಾರಿಸು ನಗಾರಿ
ಆಡು ಪಾತರ ಮ್ಯಾಳ ಗುಡಿಮುಂದ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೫||
*****

ಮೊದಲನೆಯ ನುಡಿಯಲ್ಲಿ ಮೂರ್ತಿಯ ಅಲಂಕಾರವರ್ಣನೆ, ಎರಡನೆಯದರಲ್ಲಿ ಗುಡಿಯೊಳಗಿನ ಭಜನೆಯ ಮೇಳದ ವರ್ಣನೆ, ಮೂರನೆಯದರಲ್ಲಿ ಕ್ಷೇತ್ರ ವರ್ಣನೆ, ನಾಲ್ಕನೆಯದರಲ್ಲಿ ಭಕ್ತಿಯ ಬಯಕೆ, ಹೀಗೆ ಕ್ರಮವಿದೆ.

ಛಂದಸ್ಸು:- ಮೂರು ಮೂರು ಮಾತ್ರೆಯ ಗಣಗಳಿವೆ. ಉತ್ಸಾಹ ರಗಳೆ.

ಶಬ್ದಪ್ರಯೋಗಗಳು:- ಇಟ್ಟಗಿ=ಇಟ್ಟಂಗಿ. ನಿಂತಾನ=ನಿಂತಿದ್ದಾನೆ. ಮಂದೀಲ=ಮುಂಡಾಸ. ಗೋಮ=ಪವಿತ್ರ. ಟೊಂಕ=ಸೊಂಟ. ಹೃದಯದಲ್ಲಿ ಲತ್ತಿಪೆಟ್ಟು=ದೇವರಾಯನ ಎದೆಗೆ ಆತನ ಸತಿಯಾದ ಶ್ರೀಲಕ್ಷ್ಮಿಯ ಬಲವಾದ ಏಟು ಕೊಟ್ಟಿದ್ದಾಳೆ ಎಂದು ಒಂದು ಪೌರಾಣಿಕ ಕಥೆ. ಮಾಳಿ=ಮಾಲೆ. ಬುಕ್ಕಿಟ್ಟು=ಕಪ್ಪು ಗಂಧದ ಪುಡಿ. ಔಂದೇ ಅಂಸ=ಅವನದೇ ವಂಶ. ಭಜನೆಗೋಳು=ಭಜನೆಗಳು. ಲಿಂಗಾಕಾರ=ಲಿಂಗದಾಕಾರ. ಟಿಳಕಬಟ್ಟ=ತಿಲಕದ ಬೊಟ್ಟು. ಪುಂಡಲೀಕ=ವಿಠ್ಠಲರಾಯನ ಒಬ್ಬ ಮಹಾಭಕ್ತ. ಬೌದ್ಧ್ಯ ರೂಪ=ವಿಠೋಬನು ಬೌದ್ಧವತಾರನೆಂದು ಜನರೂಢಿ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...