Home / ಕವನ / ಕವಿತೆ / ಎಡವೂರ ವೀರಭದ್ರನ ಸ್ತೋತ್ರ

ಎಡವೂರ ವೀರಭದ್ರನ ಸ್ತೋತ್ರ

ಎಡವೂರ ತಳದಲ್ಲಿ ಏನೇನ ಶಡಗರ
ಎಡಕ ನಂದೀಕೋಲ ಬಲಕ ಪಲ್ಲಕಿ ಪಂಕ
ಶಡಗರದ ಛತ್ತರಕಿ ಎಡಬಲ ಬತಾಗೀರಿ
ಹಾರೂವ ಹೂಬಾಣ ಹೊಬತ್ತಿ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೧||

ಹಣಿಯ ಮ್ಯಾಲಿನ ಗಂಧ ಗಿಣಿರಾಮ ಕುಂತಂಗ
ಕರಿಯ ಕುಂದಲದ್ಹರಳ ಕಿವಿಯಾಗ ಇಟ್ಟಾನ
ಏಸೊಂದು ಶೃಂಗಾರ ಎಡಗೈಲಿ ಹಿಡದಾನ
ಪರವೂತ ಗಿರಿಗುಡ್ಡ ಬಲಗೈಲಿ ಹಿಡದಾನ
ಚಳ್ಳುಂಗ್ರ ಚಿಮ್ಮೂತ ಕ್ವಾರ್‍ಮೀಸಿ ತಿದ್ದೂತ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೨||

ಬಿಳಿಯಂಗಿ ತೊಟ್ಟಾನ ಬಿಗದುಟ್ಟು ನಿಂತಾನ
ಸರಗಂಟಿ ಸರಮಾಲಿ ಕೊರಳೀಗಿ ಹಾಕ್ಯಾನ
ಏಸೊಂದು ರುದ್ರಾಕ್ಷಿ ಸ್ವಾಮಿ ತಾ ಧರಸ್ಯಾನ
ಪಡವಽಲ ದಿಕ್ಕಿಽಗಿ ಒಡೆಯ ತಾ ನೆನೆದಾನ
ತುಂಗಬದ್ರಿ ಕಾಳಿ ಬಾಗಿಽಲ ತೆರೆಯಂದ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೩||

ಮಂಗಳಾರಽ ದಿನ ವೀರ ನಿನ್ನೋಲಗೆ
ಚಿಟ್ಟಿ ಚಿಣಗೀ ಹೂವ ದುಂಡಮಲ್ಲಿಗಿ ಹೂವ
ಕೊಂಡಾಡೊ ದಾಸ್ಯಾಳ ಮಂಡ್ಲೇಸೂರದ್ಹೂವ
ಏಳ ಸಮದುರದಾನ ಪಾರಿಽಜಾತದ ಹೂವ
ಕಂಚಿಽಯ ಈ ಮಗ್ಗಿ ಕಮಳದ ಈ ಮಗ್ಗಿ
ಖ್ಯಾದಿಽಗಿ ಹೊಡಿ ನೂರು ಖ್ಯಾದಿಽಗಿ ಗರಿ ನೂರು
ಎಲ್ಲಽಕ ಹೆಚ್ಚಿಂದು ಬೆಲ್ಲಪತ್ತುರಿ ನೂರು
ಕರಕಿಽಯ ಪತ್ತೂಽರಿ ಕರಿಯ ತುಂಬೀ ಹೂವ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮುಂಗಳಽ ನಿತ್ಯ ಶಿನಮಂಗಳ ||೪||

ಹೆಗ್ಗಾಳಿ ಚಿನಕಾಳಿ ದೊಡ್ಡ ರಂಗಿನ ಕಾಳಿ
ಊದುಽಸು ನೆಽಪೇರಿ ಬಾರಿಸು ನಗಾರಿ
ಆಡು ಪಾತರ ಮ್ಯಾಳ ಗುಡಿಮುಂದ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೫||
*****

ಮೊದಲನೆಯ ನುಡಿಯಲ್ಲಿ ಮೂರ್ತಿಯ ಅಲಂಕಾರವರ್ಣನೆ, ಎರಡನೆಯದರಲ್ಲಿ ಗುಡಿಯೊಳಗಿನ ಭಜನೆಯ ಮೇಳದ ವರ್ಣನೆ, ಮೂರನೆಯದರಲ್ಲಿ ಕ್ಷೇತ್ರ ವರ್ಣನೆ, ನಾಲ್ಕನೆಯದರಲ್ಲಿ ಭಕ್ತಿಯ ಬಯಕೆ, ಹೀಗೆ ಕ್ರಮವಿದೆ.

ಛಂದಸ್ಸು:- ಮೂರು ಮೂರು ಮಾತ್ರೆಯ ಗಣಗಳಿವೆ. ಉತ್ಸಾಹ ರಗಳೆ.

ಶಬ್ದಪ್ರಯೋಗಗಳು:- ಇಟ್ಟಗಿ=ಇಟ್ಟಂಗಿ. ನಿಂತಾನ=ನಿಂತಿದ್ದಾನೆ. ಮಂದೀಲ=ಮುಂಡಾಸ. ಗೋಮ=ಪವಿತ್ರ. ಟೊಂಕ=ಸೊಂಟ. ಹೃದಯದಲ್ಲಿ ಲತ್ತಿಪೆಟ್ಟು=ದೇವರಾಯನ ಎದೆಗೆ ಆತನ ಸತಿಯಾದ ಶ್ರೀಲಕ್ಷ್ಮಿಯ ಬಲವಾದ ಏಟು ಕೊಟ್ಟಿದ್ದಾಳೆ ಎಂದು ಒಂದು ಪೌರಾಣಿಕ ಕಥೆ. ಮಾಳಿ=ಮಾಲೆ. ಬುಕ್ಕಿಟ್ಟು=ಕಪ್ಪು ಗಂಧದ ಪುಡಿ. ಔಂದೇ ಅಂಸ=ಅವನದೇ ವಂಶ. ಭಜನೆಗೋಳು=ಭಜನೆಗಳು. ಲಿಂಗಾಕಾರ=ಲಿಂಗದಾಕಾರ. ಟಿಳಕಬಟ್ಟ=ತಿಲಕದ ಬೊಟ್ಟು. ಪುಂಡಲೀಕ=ವಿಠ್ಠಲರಾಯನ ಒಬ್ಬ ಮಹಾಭಕ್ತ. ಬೌದ್ಧ್ಯ ರೂಪ=ವಿಠೋಬನು ಬೌದ್ಧವತಾರನೆಂದು ಜನರೂಢಿ.

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...