Home / ಕವನ / ಕವಿತೆ / ಎಡವೂರ ವೀರಭದ್ರನ ಸ್ತೋತ್ರ

ಎಡವೂರ ವೀರಭದ್ರನ ಸ್ತೋತ್ರ

ಎಡವೂರ ತಳದಲ್ಲಿ ಏನೇನ ಶಡಗರ
ಎಡಕ ನಂದೀಕೋಲ ಬಲಕ ಪಲ್ಲಕಿ ಪಂಕ
ಶಡಗರದ ಛತ್ತರಕಿ ಎಡಬಲ ಬತಾಗೀರಿ
ಹಾರೂವ ಹೂಬಾಣ ಹೊಬತ್ತಿ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೧||

ಹಣಿಯ ಮ್ಯಾಲಿನ ಗಂಧ ಗಿಣಿರಾಮ ಕುಂತಂಗ
ಕರಿಯ ಕುಂದಲದ್ಹರಳ ಕಿವಿಯಾಗ ಇಟ್ಟಾನ
ಏಸೊಂದು ಶೃಂಗಾರ ಎಡಗೈಲಿ ಹಿಡದಾನ
ಪರವೂತ ಗಿರಿಗುಡ್ಡ ಬಲಗೈಲಿ ಹಿಡದಾನ
ಚಳ್ಳುಂಗ್ರ ಚಿಮ್ಮೂತ ಕ್ವಾರ್‍ಮೀಸಿ ತಿದ್ದೂತ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೨||

ಬಿಳಿಯಂಗಿ ತೊಟ್ಟಾನ ಬಿಗದುಟ್ಟು ನಿಂತಾನ
ಸರಗಂಟಿ ಸರಮಾಲಿ ಕೊರಳೀಗಿ ಹಾಕ್ಯಾನ
ಏಸೊಂದು ರುದ್ರಾಕ್ಷಿ ಸ್ವಾಮಿ ತಾ ಧರಸ್ಯಾನ
ಪಡವಽಲ ದಿಕ್ಕಿಽಗಿ ಒಡೆಯ ತಾ ನೆನೆದಾನ
ತುಂಗಬದ್ರಿ ಕಾಳಿ ಬಾಗಿಽಲ ತೆರೆಯಂದ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿನಮಂಗಳ ||೩||

ಮಂಗಳಾರಽ ದಿನ ವೀರ ನಿನ್ನೋಲಗೆ
ಚಿಟ್ಟಿ ಚಿಣಗೀ ಹೂವ ದುಂಡಮಲ್ಲಿಗಿ ಹೂವ
ಕೊಂಡಾಡೊ ದಾಸ್ಯಾಳ ಮಂಡ್ಲೇಸೂರದ್ಹೂವ
ಏಳ ಸಮದುರದಾನ ಪಾರಿಽಜಾತದ ಹೂವ
ಕಂಚಿಽಯ ಈ ಮಗ್ಗಿ ಕಮಳದ ಈ ಮಗ್ಗಿ
ಖ್ಯಾದಿಽಗಿ ಹೊಡಿ ನೂರು ಖ್ಯಾದಿಽಗಿ ಗರಿ ನೂರು
ಎಲ್ಲಽಕ ಹೆಚ್ಚಿಂದು ಬೆಲ್ಲಪತ್ತುರಿ ನೂರು
ಕರಕಿಽಯ ಪತ್ತೂಽರಿ ಕರಿಯ ತುಂಬೀ ಹೂವ
ಕರಿ ಈರಭದ್ರನ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮುಂಗಳಽ ನಿತ್ಯ ಶಿನಮಂಗಳ ||೪||

ಹೆಗ್ಗಾಳಿ ಚಿನಕಾಳಿ ದೊಡ್ಡ ರಂಗಿನ ಕಾಳಿ
ಊದುಽಸು ನೆಽಪೇರಿ ಬಾರಿಸು ನಗಾರಿ
ಆಡು ಪಾತರ ಮ್ಯಾಳ ಗುಡಿಮುಂದ ಕಂಡಿಽರಿ
ಗುಗ್ಗಽಳದಾರೂತಿ ಗುಡಿಮುಂದ ಕಂಡಿಽರಿ
ಶರಣಬಂದಯ್ಯಗ ಕರಣ ನೋಡಿ ಪೂಜಿಗೋಳ ಬನ್ನೆ
ಜಯಮಂಗಳಽ ನಿತ್ಯ ಶಿವಮಂಗಳ ||೫||
*****

ಮೊದಲನೆಯ ನುಡಿಯಲ್ಲಿ ಮೂರ್ತಿಯ ಅಲಂಕಾರವರ್ಣನೆ, ಎರಡನೆಯದರಲ್ಲಿ ಗುಡಿಯೊಳಗಿನ ಭಜನೆಯ ಮೇಳದ ವರ್ಣನೆ, ಮೂರನೆಯದರಲ್ಲಿ ಕ್ಷೇತ್ರ ವರ್ಣನೆ, ನಾಲ್ಕನೆಯದರಲ್ಲಿ ಭಕ್ತಿಯ ಬಯಕೆ, ಹೀಗೆ ಕ್ರಮವಿದೆ.

ಛಂದಸ್ಸು:- ಮೂರು ಮೂರು ಮಾತ್ರೆಯ ಗಣಗಳಿವೆ. ಉತ್ಸಾಹ ರಗಳೆ.

ಶಬ್ದಪ್ರಯೋಗಗಳು:- ಇಟ್ಟಗಿ=ಇಟ್ಟಂಗಿ. ನಿಂತಾನ=ನಿಂತಿದ್ದಾನೆ. ಮಂದೀಲ=ಮುಂಡಾಸ. ಗೋಮ=ಪವಿತ್ರ. ಟೊಂಕ=ಸೊಂಟ. ಹೃದಯದಲ್ಲಿ ಲತ್ತಿಪೆಟ್ಟು=ದೇವರಾಯನ ಎದೆಗೆ ಆತನ ಸತಿಯಾದ ಶ್ರೀಲಕ್ಷ್ಮಿಯ ಬಲವಾದ ಏಟು ಕೊಟ್ಟಿದ್ದಾಳೆ ಎಂದು ಒಂದು ಪೌರಾಣಿಕ ಕಥೆ. ಮಾಳಿ=ಮಾಲೆ. ಬುಕ್ಕಿಟ್ಟು=ಕಪ್ಪು ಗಂಧದ ಪುಡಿ. ಔಂದೇ ಅಂಸ=ಅವನದೇ ವಂಶ. ಭಜನೆಗೋಳು=ಭಜನೆಗಳು. ಲಿಂಗಾಕಾರ=ಲಿಂಗದಾಕಾರ. ಟಿಳಕಬಟ್ಟ=ತಿಲಕದ ಬೊಟ್ಟು. ಪುಂಡಲೀಕ=ವಿಠ್ಠಲರಾಯನ ಒಬ್ಬ ಮಹಾಭಕ್ತ. ಬೌದ್ಧ್ಯ ರೂಪ=ವಿಠೋಬನು ಬೌದ್ಧವತಾರನೆಂದು ಜನರೂಢಿ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...