Home / ಕವನ / ಕವಿತೆ / ದರ್‍ಶನ

ದರ್‍ಶನ

ಶ್ರೀರಾಮ ಪಟ್ಟಾಭಿಷೇಕದಲಿ ಒಲಿಯುತ್ತ
ಜಾನಕಿಯು ರಘುವರನ ಸಂಜ್ಞೆಯರಿತು.
ಹನುಮಂತನಿಂದಾಯ್ತು ರಾಮದರ್ಶನಮೆಂದು
ನವರತ್ನಹಾರಮಂ ಕೊರಳಿಗಿತ್ತು
ಸಿಂಗರಿಸೆ ಹೊಳೆ ಹೊಳೆದ ದೇದೀಪ್ಯಮಾನದಲಿ
ರಾಮರತ್ನವ ಧರಿಸಿ ನುಡಿಯ ಮರೆತು.
ಒಂದೊಂದೆ ರತ್ನಮಂ ಪರಿಕಿಸುತ ಕಡಿಯುತ್ತ
ಪುಡಿಗೈಯುತುಗುಳಿದಂ ರುಚಿಯನರಿತು.
ಆ ಸರದ ರತ್ನಗಳ ಹಾಳುಮಾಡಿ
ಶ್ರೀರಾಮರಡಿಗಳಲಿ ಹಾಕಿ ಹಾಡಿ
ತಾಯಿಯಾ ಕೂಪಮಂ ನೊಂದ ನೋಡಿ
ಕೋಡಗಕೆ ಮಣಿಯೇಕೆಯೆಂದ ಬೇಡಿ.

ಕಪಿಗೆ ಸಿಂಗರಮೇಕೆ ಗೌರವಂ ಸಲ್ಲುವುದೆ
ಕುಲಬುದ್ಧಿಯಂ ತೋರ್‍ದೆ ಪುಡಿಯ ಗೈದು
ಸಾಲದಾದುದೆ ನಿನಗೆ ನವರತ್ನಹಾರಮಿದು
ಹಣ್ಣೆಂದು ಬಗದೆಯಾ ಹಸಿವ ನೆನೆದು.
ಇದೊ ಶಾಪ ನಿನಗೆಂದು ಕುಪಿತಳಾದಳು ತಾಯಿ
ಹಣ ಚಾಚಿದನು ಪದದಿ ದೇಹಕೆಡೆದು.
ಈ ಮಹಾ ಹಾರದೊಳು ರಾಮನಾಮದ ಸವಿಯ
ಕಾಣದಾಂ ಬಿಸುಡಿದೆನು ಹುರುಳನರಿದು
ನಿಸ್ಸಾರವೀ ಹಾರ ಕ್ಷಮಿಸು ತಾಯಿ
ರಾಮನಾಮದ ರತ್ನ ಸೌಖ್ಯದಾಯಿ
ರಾಮಸನ್ನಿಧಿಯಿರಲು ಬೇರೆ ಬೇಕೆ
ನಿಮ್ಮ ಮಗುವಾಗಿರಲು ಹಾರಮೇಕೆ?
ನಸುನಕ್ಕನಾ ರಾಮ ಸಂತವಿಸಿ ಸೀತೆಯನು
ಅವನ ಕೊಂಡಾಡಿದಳು ನಿಜವನರಿತು.
ರಾಮನಾಮದ ಮಹಿಮೆಯರಿತವನು ಹನುಮಂತ
ರಾಮನೊಲಿದಿಹನವಗೆ ತನ್ನನಿತ್ತು
ಭಕ್ತಿಮರುಳಿಂ ಕುಣಿವ ಹನುಮಂತನೊಡನಿರುವ
ತೊಡಕಾಯ್ತು ರಾಜ್ಯಮಂ ನಡೆಸಲೆನಿತು.
ಅವನು ನೆನೆದಲ್ಲಿರುವ ಅವನ ಪ್ರೇಮಕ ಮಣಿವ
ಅಡವಿಯೇ ಮನೆಯಾಯ್ತು ಕಪಿಯ ಬೆರೆತು.
ರಾಮನಾಮವ ಹಾಡಿ ಕುಣಿಯುತಿಹನು
ಮೈಮರೆತು ದಾಶರಥಿ ನಗುತಲಿಹನು
ರಾಮ ಬಂದುದ ಕಾಣ ಅಳುತಲಿಹನು
ಮಾರುತಿಯ ನುಡಿಸಿದನು ಭರದಿ ತಾನು.

ಹಾಡುತಿರೆ ನೀನಿಲ್ಲಿ ರಾಜಕಾರ್ಯದ ನಾವೆ
ಎಂತು ನಡೆವುದು ಹೇಳು ರಾಜನಿರದೆ.
ಹಾಡು ಹಾಕುತ ಚಿಟಿಕಿ ಶಯನ ಕಾಲದಿ ಬಂದು
ಆಕಳಿಪ ಸಮಯದೊಳು ಎನಲು ನಿಜದೆ.
ತಾಯಿಯೊಡನಿರುವಾಗ ಸೆಜ್ಜೆಯೊಳು ಬಹೆನೆಂತು
ಅಲ್ಲೇಕೆ ಇಲ್ಲಿರುವೆ ಚಿಂತೆಯಿರದೆ.
ಆಗದಾಗದು ಹನುಮ ಅರಮನೆಯ ಬಾಗಿಲೊಳ್
ಇರ್‍ದು ನೀ ಇರುಳಿನೊಳು ನೆನೆದು ಬಿಡದೆ.
ಚಿಟಿಕಿಯಂ ಹಾಕಿದೊಡೆ ಆಕಳಿಸುವೆ
ಎನಲಯೋಧ್ಯಯನೈದಿ ರಾಮ ಸೇವೆ
ಯಲಿ ನಿಂದ ಭಕ್ತಿಯಲಿ ಆಯ್ತು ಮರವೆ
ಚಿಟಿಕಿ ಹಾಕುತ ಕುಣಿದ ಹೇಳಲಳವೆ!
ಬಿಟ್ಟ ಬಾಯ್ ಮುಚ್ಚದಿಹ ಮಲಗಿರುವ ರಘುರಾಮ
ಸೀತೆಗಚ್ಚರಿಯಾಯ್ತು ಭಯದಿ ಬಂದು
ಗುರು ವಸಿಷ್ಠಂಗರುಹೆ ಓಡಿಬಂದರು ಹನುಮ
ನಿರವರಿತು ಅಪ್ಪಿದರು ಕೈಯ ತಂದು.
ರಾಮನಿರವನ್ನೊರೆಯೆ ತಪ್ಪನೊಪ್ಪುತ ಬಂದು
ಅಜನ ಪಟ್ಟವ ಪಡೆದ ಪದದಿ ನಿಂದು.
ಎಲೆ ರಾಮ ನೀ ಸುಲಭ ಮೋಡಿಗಳ ಮಾಡುವೆಯ
ಎನುತ ನಮಿಸಿದ ಕಣ್ಣನೀರ ತಂದು
ಅಚ್ಚರಿಯ ತಾಳಿದಳು ಸೀತೆ ಮನದಿ
ಮಚಿದಳು ಮಾರುತಿಯ ಹಿಗ್ಗಿ ಭರದಿ
ಚಿರಜೀವಿಯಾಗೆಂದು ಹರಸಿ ಹೊಗಳಿ
ಅರೆನಗೆಯ ನಕ್ಕಳಾ ದೇವಿ ಮಗುಳಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...