ಬಂಧವಿಮೋಚನೆ

ಮನದ ರಿಂಗಣದ ರಂಗಭೂಮಿಯನು ಅಗೆದು ಬಗೆದು ನಾನು
ಆತ್ಮಮೌನಿ ಮುನಿಯಾದೆ ಬಾನಿನಲಿ ನಿಂತ ಹಾಗೆ ಭಾನು.
ಪ್ರಾಣ ಅಲ್ಲ; ಹೊತ್ತರಿಯೆ ನಾನು; ಕ್ಷಯರಹಿತ ಚಂದ್ರನಾಗಿ
ಸನಾತನದ ಆ ಬ್ರಹ್ಮಗೋಲದಲಿ ನಾನೆ ಕೇಂದ್ರವಾಗಿ.

ಮುಕ್ತನಾದೆ ನಾ, ತೀರಿ ಹೋಯ್ತು, ಆ ಅಲ್ಪ ಆತ್ಮರಚನ.
ಅಮೃತ ನಾನು, ಕೇವಲನು ನಾನು, ಮೀರಿದೆನು ವರ್ಣವಚನ.
ನಾನೆ ಕಲ್ಪಿಸಿದ ವಿಶ್ವದಿಂದ ಹೊರಬಿದ್ದೆ ಎದ್ದೆ ಮೇಲೆ.
ನಾಮಕ್ಕತೀತ ನಾನಾದೆನಿಂದು ನನಗಿಲ್ಲ ಮೇರೆ ಬೇರೆ.

ನನ್ನ ಮನವು ಗಂಭೀರ ಗು೦ಭ ತುಂಬೆಲ್ಲ ಹಿಟ್ಟು ಬೆಳಕು.
ನನ್ನ ಹೃದಯವಾನಂದತುಂದಿಲವು ಪ್ರಶಮದೊಳಗು ಥಳಕು.
ಮುಟ್ಟು ತಟ್ಟು ಕಿವಿ ಕಣ್ಣು ಕಟ್ಟು ಕರಣಕ್ಕೆ ಇಲ್ಲಿ ಕುಂದು
ಆ ಅಚ್ಛ ಸ್ವಚ್ಚ ಆನಂತ್ಯದಲ್ಲಿ ಈ ದೇಶ ಏಕಬಿಂದು.

ಸತ್ ಪುರುಷ ಹರುಷ ಆನಂದ ಸಿಂಧು ಲೋಕೈಕವಾದ ಪರ್ವ
ಯಾರೊಬ್ಬನಲ್ಲ, ಆ ಎಲ್ಲರಲ್ಲಿ ಇರುವೊರ್‍ವ ನಾನೆ ಸರ್‍ವ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತೊಡಕು
Next post ವಾಗ್ದೇವಿ – ೩೧

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…