ಸುವರ್‍ಣದೀಪ

ನನ್ನ ಮಿದುಳು ದಳವೇರಿ ದಳ್ಳಿಸಿತು ಸ್ವರ್‍ಣದೀಪ್ತಿ ಇಳಿಯೆ.
ಮನದ ಕರಿನೆರೆಯ ಹುಳುಗಳೆಲ್ಲ ಹೊತ್ತೇರಿ ನಿದ್ದೆ ತಿಳಿಯೆ.
ಜ್ಞಾನಮಯದ ಉದ್ದೀಪನಕ್ಕೆ ಪ್ರಜ್ವಲಿತವಾದ ಮೇಲೆ.
ಶಾಂತ ಕಾರ್‍ತಿಕದ ನಟ್ಟನಡುವೆ ಉರಿವಂತೆ ಪ್ರೇಮಜ್ವಾಲೆ.

ಕೊರಳಿಗಿಳಿದು ಬಂದಿರಲು ಆಹ! ಆ ನಿನ್ನ ಸರ್ಣದೀಪ
ವಾಣಿ ಇನಿದಾಗಿ ಮಾಗಿ ನುಡಿಯುತಿದೆ ಏಕರಾಗ ಭೂಪ.
ಶ್ರುತಿಯ ಮೀಟಿದರೆ, ಸ್ತೋತ್ರ ಜಲಧಿ ನಿನ್ನಡಿಗೆ ನುಗ್ಗಲುಂಟು
ಅಮೃತ ಕುಡಿದ ಗಂಧರ್‍ವಮತ್ತ ಗೀರ್‍ವಾಣ ಹಿಗ್ಗಲುಂಟು.

ನಿನ್ನ ಸ್ವರ್ಣದೀಪ್ತಿಯಲ್ಲಿ ಬೆಳಗಿತಿಗೊ ನನ್ನ ಹೃದಯ ಭಾಗ
ನಿನ್ನ ಶಾಶ್ವತದ ಉಸಿರು ಆಡುತಿದೆ ಪ್ರಾಣದಿಟುಕು ಜಾಗ.
ನಿನ್ನ ಸುತ್ತು ಕಟ್ಟಿತ್ತು ಈಗ ದೇಗುಲವೆ ರೂಪಗೊಂಡು
ಹೃದಯರಾಗಗಳು ಶಿಖರಗಟ್ಟುತಿವೆ ಧೂಪ ಎಂದುಕೊಂಡು.

ಪಾದಗಳಲಿ ಇಳಿದಿರಲು ನಿನ್ನದಾದಾ ಸುವರ್ಣದೀಪ
ನನ್ನ ಇಳೆಯು ಲೀಲಾಽಭೂಮಿ ನಿನ್ನಡಿಗೆ ಬಹು ಸಮೀಪ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಲವಿನಾಟ
Next post ವಾಗ್ದೇವಿ – ೩೨

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys