Home / ಕವನ / ಕವಿತೆ / ಅನಂತ ಸಾಹಸ

ಅನಂತ ಸಾಹಸ

ಆನಂತ್ಯದೊಂದು ನವ ಜಲಧಿಯಲ್ಲಿ ಹೊರಟಿಹುದು ನನ್ನ ನಾವೆ.
ಎಲ್ಲಿ ಹೊರಟಿತೋ; ತನ್ನ ಮಾನವ್ಯ ಬಿಟ್ಟು ಬೇರೆ ಠಾವೆ?
ಮಸಕು ಮಸಕು ಹಿಂದೆಲ್ಲ, ಮುಂದೆ ಪಾತಾಳಖಾತ ಸಿಂಧು
ಗೊತ್ತುಗುರಿಯಿಲ್ಲ, ದೂರ ಧ್ರುವದಾಚೆ ಬೆಳಕು ಸ್ಫಟಿಕ ಬಿಂದು!

ಕಾಣದೊಂದು ಕೈ ಹುಟ್ಟ ಹಾಕುತಿದೆ, ಕಾಂಬೆ ಕತ್ತಲೊಂದೆ
ಇರುಳು ರಾತ್ರಿ ಅಮವಾಸಿ ಗುಹೆಯು ಬಾಯ್ತೆರೆದ ಹಾಗೆ ಮುಂದೆ.
ಒಳಗೆ ಕೆಳಗೆ ಹಸಿನಾತವೆಂದು ಪಂಚಾಸ್ಯ ಗುಡುಗುತಿಹುದು.
ಸತ್ತ ಒಲವು ಬೇಸತ್ತ ಒಲವು ಘನ ನಿದ್ರೆ ತೊಡಗುತಿಹುದು.

ಅರಸಿ ಹೊರಟ ಆ ಮಹಾಶಕ್ತಿ ನನ್ನನ್ನೆ ಸುತ್ತಿ ಮುತ್ತಿ
ತೋಡಿಹುದಗಳ್ತೆ ಮುಟ್ಟಿಹುದು ಅಬ್ಬ ನಾಗೇಂದ್ರನನಂತ ನೆತ್ತಿ
ಮೇಲೆ ನೋಡಿದರೆ ಯಾವ ಜೀವವೂ ತುಳಿಯದಿದ್ದ ಶಿಖರ
ಮುಳುಗಿ ಹೋದೆ ಅದ್ವೈತ ಐಕ್ಯದಲಿ ಅದರ ಆಚೆ ಪ್ರಖರ.

ಎಂಥ ಜಾಗೃ ಉರಿದೆದ್ದ ಹಾಗೆ ಭಗವಂತ! ಏನು ಕಿಚ್ಚು!
ಅವತರಿಸಲಿರುವ ಆ ಮೆಚ್ಚು ಮಾಟ ಆನಂದವೆಂಬ ಅಚ್ಚು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...