ಬಡಭಾರತಿಗೆ

ಏನುಬೇಡಲಿ ಬಂದು ಭಾರತಿಯೆ ನಿನ್ನ |
ಮಾನವಂತಿಯೆ ಜನನಿ ಸಲಹು ನೀನೆನ್ನ ||ಪಲ್ಲ||

ಬಂಗಾರ ಬೇಡುವೆನೆ ಬಳಿದೆಲ್ಲ ಪೋಗಿಹುದು |
ಶೃಂಗಾರ ಬೇಡುವೆನೆ ಶಿವನ ಮನೆಯು ||
ಮಂಗನಂತಿಹ ಮನವು ಇಂಗಿತವನರಿಯದಲೆ |
ಅಂಗಹೀನನ ತೆರದಿ ತಿರುಗುವದಕಂಡು || ೧ ||

ಅನ್ನವನು ಬೇಡುವೆನೆ ನಿನ್ನೆನಿನಗುಪವಾಸ |
ಅಣ್ಣನನು ಕೇಳುವೆನೆ ವನವಾಸವವಗೇ ||
ಇನ್ನೊಂದುಗಳಿಗೆಯನು ಬಾಳಿಕಳೆಯೆನುಯೆಂದು
ಸನ್ನು ತಾಂಗಳೆ ನಿನ್ನ ನಾ ಜವದಿ ಕಂಡು || ೨ ||

ಬೇಡುವೆನೆ ಸ್ವಾತಂತ್ರ್ಯ ಬಳಲುತಿಹಿ ಬಂಧನದಿ |
ಆಡುವೆನೆ ಸವಿಮಾತ ಅಳುತಿರುವಿ ತಾಯೇ ||
ಪೊಡವಿಯೊಳು ಒಡಲುರಿಯು ಸುಡುತಿಹುದು ತಡೆಯದಲೆ |
ಪೊಡಮಡುವೆ ಗಡಬಂದು ಸಲೆಪೊರೆವುದೆಂದು || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ನಡೆವ ದಾರಿ
Next post ವಚನ ವಿಚಾರ – ನೀನು ನಾನು

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…