ಬಡಭಾರತಿಗೆ

ಏನುಬೇಡಲಿ ಬಂದು ಭಾರತಿಯೆ ನಿನ್ನ |
ಮಾನವಂತಿಯೆ ಜನನಿ ಸಲಹು ನೀನೆನ್ನ ||ಪಲ್ಲ||

ಬಂಗಾರ ಬೇಡುವೆನೆ ಬಳಿದೆಲ್ಲ ಪೋಗಿಹುದು |
ಶೃಂಗಾರ ಬೇಡುವೆನೆ ಶಿವನ ಮನೆಯು ||
ಮಂಗನಂತಿಹ ಮನವು ಇಂಗಿತವನರಿಯದಲೆ |
ಅಂಗಹೀನನ ತೆರದಿ ತಿರುಗುವದಕಂಡು || ೧ ||

ಅನ್ನವನು ಬೇಡುವೆನೆ ನಿನ್ನೆನಿನಗುಪವಾಸ |
ಅಣ್ಣನನು ಕೇಳುವೆನೆ ವನವಾಸವವಗೇ ||
ಇನ್ನೊಂದುಗಳಿಗೆಯನು ಬಾಳಿಕಳೆಯೆನುಯೆಂದು
ಸನ್ನು ತಾಂಗಳೆ ನಿನ್ನ ನಾ ಜವದಿ ಕಂಡು || ೨ ||

ಬೇಡುವೆನೆ ಸ್ವಾತಂತ್ರ್ಯ ಬಳಲುತಿಹಿ ಬಂಧನದಿ |
ಆಡುವೆನೆ ಸವಿಮಾತ ಅಳುತಿರುವಿ ತಾಯೇ ||
ಪೊಡವಿಯೊಳು ಒಡಲುರಿಯು ಸುಡುತಿಹುದು ತಡೆಯದಲೆ |
ಪೊಡಮಡುವೆ ಗಡಬಂದು ಸಲೆಪೊರೆವುದೆಂದು || ೩ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೀ ನಡೆವ ದಾರಿ
Next post ವಚನ ವಿಚಾರ – ನೀನು ನಾನು

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…