Home / ಕವನ / ಕವಿತೆ / ಇಡು ಭಕ್ತಿ, ನಡೆ ಮುಂದೆ

ಇಡು ಭಕ್ತಿ, ನಡೆ ಮುಂದೆ

ಅನುದಿನವು ಇಡು ಭಕ್ತಿಯನ್ನು ದೇವನಡಿಯಲ್ಲಿ
ಅನುಸರಿಸು ಸನ್ಮಾರ್‍ಗವನೆ ನಿತ್ಯ ಮುದದಿ.
ಎತ್ತಲುಂ ಕತ್ತಲೆಯು ಸುತ್ತಿಹುದು ದಾರಿಯನು
ಕಿತ್ತುಬಿಡು ಭಯವನ್ನು, ಎತ್ತು ಪೌರುಷವಾ.
ಅತ್ತಿತ್ತ ಕದಲದಿರು, ಚಿತ್ತವನು ಸ್ಥಿರಗೊಳಿಸು,
ಎತ್ತರದೊಳಿದೆ ತಾರೆ, ಉತ್ತಮದಿ ನಡಿಸಲ್.

ಕಡು ಭಯಂಕರವಾಗಿ, ನಡೆಯಲಸದಳವಾದ
ಕಡೆಗಾಣದಿಹಹಾದಿ ಹಿಡಿದು ನೀನಿರಲು,
ಒಡಲ ಬಲ ಲೆಕ್ಕಿಸದೆ, “ಬಡವಾದೆ, ನೊಂದೆ”ನದೆ
ಇಡು ಹೆಜ್ಜೆ, ನಡೆ ಮುಂದೆ, ಬಿಡು ಭೀತಿ ಭಯವಾ.

ಕೆಟ್ಟ ಕುಹಕೋಪಾಯ, ಕೆಟ್ಟ ತಂತ್ರಗಳನ್ನು
ಬಿಟ್ಟು ಬೆಳಕಿಗೆ ಅಂಜಿ, ಗುಟ್ಟಾಗಿರುವುದಂ,
ಬಟ್ಟೆ ತುದಿಯನು ಹೇಗೆ ಮುಟ್ಟಲಾಪುದೆ ನೋಡು!
ಕಟ್ಟಕಡೆಗಿರಲಿ ಜಯ! ಪಟ್ಟಿರಲಿ ಸೋಲು!

ಇದೆ ಸುರಕ್ಷಿತ ಮಾರ್ಗ! ಇದೆ ಸರಳ ಕಟ್ಟಳೆಯು!
ಇದೆ ಅಂತಃ ಶಾಂತಿ! ಇದೆ ಮನೋಬಲವು!
ಇದೆ ಸತ್ಪಥವ ತೋರೆ ಉದಯಿಸಿದ ಧ್ರುವ ತಾರೆ
ಇದನೆ ಪಠಿಸೈ ನೀನು, ಇದನೆ ಜಪಿಸುತಿರು.

ಕೆಲರು ಬರಿ ಹೊಗಳುವರು; ಕೆಲರು ಬರಿ ತೆಗಳುವರು;
ಕೆಲರು ಮತ್ಸರಿಸುವರು; ಕೆಲರು ಮೆಚ್ಚಿಪರು;
ಹಲವರನು ಮೆಚ್ಚಿಸುವ ಕೆಲಸವೇತಕೆ ನಿನಗೆ?
ಒಲಿಸು ಹರಿಯನು; ನಿನ್ನ ಕೆಲಸವನು ಸಲಿಸು.
*****
(ಸ್ವದೇಶಾಭಿಮಾನಿಯಿಂದ)

Tagged:

Leave a Reply

Your email address will not be published. Required fields are marked *

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...