ಹೊಗೆಯ ಗಾಡಿ

ನೊಗವನೆತ್ತಿನ ಕೊರಳೊಳಿಡುವ ಪಾಡಿಲ್ಲ,
ಬಿಗಿದ ಕುದುರೆಯ ಹೂಡುವಾಯಾಸವಿಲ್ಲ,
ಮಿಗೆ ಕಾದ ನೀರ ಹಬೆಯಿಂದ ಬಲು ಬೇಗ
ಹೊಗೆಯ ಗಾಡಿಯು ನೋಡು ಹೋಗುತಿಹುದೀಗ.

ಸೋಲಿಪುದು ಗಾಳಿಯನ್ನು ಬಲು ವೇಗದಿಂದ;
ಮೇಲೆ ಹೊಗೆಯುಗುಳುತಿಹುದೀ ಕೊಳವೆಯಿಂದ;
ಕಾಲಕ್ಕೆ ಸರಿಯಾಗಿ ಹೊರಟು, ಕಂಬಿಗಳ
ಮೇಲೆ ಹರಿದೈದುವುದು ದೂರದೂರಗಳ.

ದಾರಿಯಲಿ ಕಳ್ಳಕಾಕರ ಭೀತಿಯಿಲ್ಲ,
ಮೀರಿ ಬಹ ಮಳೆ ಬಿಸಿಲುಗಳ ಬಾಧೆ ಇಲ್ಲ.
ದೂರ ದೇಶದ ಬೆಳಸನೊಯ್ದು ತರಬಹುದು,
ಯಾರಿಗಿದರುಪಯೋಗಗಳ ಹೊಗಳಲಹುದು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಮ್ಮಾನ ಸಂಭ್ರಮವಿದೇನು ಸಮ್ಮೋಹನಕೆ?
Next post ಕಥನ ಹಾಗೂ ಪುರಾಣ: ಒಂದು ವಸ್ತುವಿನ ಎರಡು ಮುಖಗಳು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಬೋರ್ಡು ಒರಸುವ ಬಟ್ಟೆ

    ಪ್ರಕರಣ ೬ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…