ಬಾಳಿಗಾಹಾರ ಹೇಗೋ ಹಾಗೆ ನೀ ನನಗೆ,
ಬೇಸಿಗೆಯ ನೆಲಕೆ ಮಳೆಧಾರೆ ಸುರಿದಂತೆ;
ನನ್ನ ಈ ತುಯ್ತಗಳು ಎಲ್ಲವೂ ನಿನಗಾಗೇ
ಜಿಪುಣನಿಗು ಅವನ ನಿಧಿಗೂ ನಡುವೆ ಇರುವಂತೆ.
ನಿನ್ನ ಬಗೆಗಿನ ಹೆಮ್ಮೆ ಒಮ್ಮೆ, ಮರುಗಳಿಗೆಯೇ
ಕಾಲ ನಿನ್ನೀ ಚೆಲುವ ಕದಿವನೆನ್ನುವ ಶಂಕೆ;
ನಿನ್ನೊಬ್ಬನೊಂದಿಗೇ ಇರುವ ಅಪೇಕ್ಷೆ ಒಡನೆ
ಜಗವೆಲ್ಲ ನನ್ನ ಭಾಗ್ಯವ ಕಾಣಲೆಂಬಾಸೆ;
ನಿತ್ಯ ಕಾಣುತ್ತ ಕಣ್ಣಿಗೆ ಹಬ್ಬ ಕೆಲವು ಸಲ,
ದೂರವಿದ್ದಾಗಲೋ ಉಪವಾಸ ಹಲವು ಸಲ;
ಏನು ಗಳಿಸುವ ಯತ್ನದೊಳಗೂ ಹರ್ಷವೆ ಇಲ್ಲ,
ನಿನ್ನಿಂದ ಪಡೆದದ್ದೆ, ಪಡೆಯಲಿರುವುದೆ ಎಲ್ಲ.
ಭೂರಿಭೋಜನ ಅಥವ ಉಪವಾಸ ಹೀಗಿರುವೆ,
ತಿಂದು ತೇಗುವೆ, ಇಲ್ಲ ಏನೂ ಇರದಿರುವೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 75
So are you to my thoughts as food to life
Related Post
ಸಣ್ಣ ಕತೆ
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…
-
ಧರ್ಮಸಂಸ್ಥಾಪನಾರ್ಥಾಯ
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
-
ನಂಬಿಕೆ
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಬಿರುಕು
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…