ಯಾಕೆನ್ನ ಕಾವ್ಯ ಹೊಸ ಮಿಂಚಿರದೆ ಬರಡಾಯ್ತು ?

ಯಾಕೆನ್ನ ಕಾವ್ಯ ಹೊಸ ಮಿಂಚಿರದೆ ಬರಡಾಯ್ತು ?
ಯಾಕಾಯ್ತು ದೂರ ವೈವಿಧ್ಯ ನಾವೀನ್ಯಕ್ಕೆ ?
ಹೊಸ ಕಾಲಗತಿಗೆ ಧೋರಣೆಗೆ ಶ್ರುತಿಗೊಡದಾಯ್ತು,
ಹೊಸ ಶೈಲಿ ತಂತ್ರ ಗಮನಿಸಲಿಲ್ಲ ಯಾತಕ್ಕೆ ?
ಇಂದಿಗೂ ಹಿಂದಿನಂತೊಂದೆ ಥರ ಹಾಡುವುದು.
ಹೊಸ ಕಾಣ್ಕೆಗೂ ಹಳೆಯ ಮಾತುಗಳೆ ಯಾಕಿಷ್ಟ ?
ಪದಪದದಲೂ ನನ್ನ ಹೆಸರು ಬಯಲಾಗುವುದು,
ಹುಟ್ಟು ನೆಲ ಹೊರಟುದೆಲ್ಲಿಂದ ಎಲ್ಲಾ ಸ್ಪಷ್ಟ.
ನನ್ನೊಲವೆ ನನ್ನೆಲ್ಲ ಕವಿತೆಯಲಿ ನೀನಷ್ಟೆ,
ನೀನು ಪ್ರೇಮ ಇವೆರಡೆ ನನ್ನ ಕಾವ್ಯದ ವಸ್ತು
ಹಳೆಯದನೆ ಹೊಸಹೆಣಿಗೆಯಲ್ಲಿ ಹೂಡುವುದಷ್ಟೆ,
ಬಳಸಿದ್ದುದನ್ನೆ ಬಳಸುವುದು ಮತ್ತೂ ಮತ್ತೂ,
ಸೂರ್ಯ ದಿನ ದಿನ ಹಳಬ ಹೊಸಬ ಎರಡೂ ಹೇಗೆ,
ಹಾಡಿದ್ದೆ ಹಾಡುವುದು ನನ್ನ ಒಲವೂ ಹಾಗೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 76
Why is my verse so barren of new pride

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೬
Next post ಓಯಸಿಸ್

ಸಣ್ಣ ಕತೆ

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…