ತೋರುವುದು ಕನ್ನಡಿ ಈ ಚೆಲುವು ಕರಗುವುದ

ತೋರುವುದು ಕನ್ನಡಿ ಈ ಚೆಲುವು ಕರಗುವುದ,
ಗಡಿಯಾರ ಕೈಮುಳ್ಳು ಗಳಿಗೆಗಳು ಜರುಗುವುದ;
ಈ ಖಾಲಿ ಪುಟಗಳಲಿ ಬರೆ ಮನದೊಳಿರುವುದ,
ರುಚಿನೋಡಿ ಬಳಸು ಈ ಪುಸ್ತಕದ ಒಳತಿರುಳ.
ಕನ್ನಡಿಯು ಬಿಂಬಿಸುವ ಮುಖದ ಮುರಿನೆರಿಗೆಗಳು
ಕೆಳಕುಸಿದ ಗೋರಿಗಳ ನೆನಪನ್ನು ಕೆದುಕುವುವು.
ಗಡಿಯಾರದೊಳಗಿನ ನಿಧಾನ ನಡಿಗೆಯ ಮುಳ್ಳು
ಕಾಲನ ಕಳ್ಳನಡಿಗೆಯ ಪ್ರಗತಿ ತೋರುವುವು.
ನೆನಪಿಂದ ಉದುರಿಹೋಗುವುದೆ ಇದೆ ಬಹುಭಾಗ
ಬರೆಯದನು ಪುಸ್ತಕದ ಈ ಖಾಲಿ ಪುಟಗಳಲಿ,
ನಿನ್ನಂತರಂಗ ಚಿಂತನೆಯ ಸಂತತಿ ಆಗ
ನೀಡುವುದು ನಿನ್ನ ಪರಿಚಯವ ನಿನಗೇ ಮರಳಿ.
ಎಷ್ಟು ಸಲ ಬಳಸಿದರೆ ಅಷ್ಟು ಅಷ್ಟೂ ನಿನಗೆ,
ಲಾಭವಿದೆ ಪುಸ್ತಕದ ಅರ್‍ಥಶ್ರೀಮಂತಿಕೆಗೆ.
*****
ಮೂಲ: ವಿಲಿಯಂ ಷೇಕ್ಸ್‌ಪಿಯರ್
Sonnet 77
Thy glass will show thee how thy beauties wear

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾವಣಾಂತರಂಗ – ೭
Next post ಕಾಣೆಯಾಗಿವೆ

ಸಣ್ಣ ಕತೆ

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys