ನನ್ನ ವಾಣಿಗೆ ಸಾರವಾಗೆಂದು ಮರಮರಳಿ
ನಿನ್ನ ಕರೆಯುತ್ತ ಎಷ್ಟೆಲ್ಲ ಸ್ಫೂರ್ತಿಯ ಪಡೆದೆ,
ಈಗ ಕಬ್ಬಿಗರೆಲ್ಲ ನನ್ನ ದಾರಿಗೆ ಹೊರಳಿ
ಅವರ ಕವಿತೆಗೆ ನಿನ್ನ ನೆರಳಲ್ಲಿ ಮೆರವಣಿಗೆ.
ನನ್ನಂಥ ಮೂಕನನೂ ಹಾಡಹಚ್ಚಿದ ಕಣ್ಣು
ಇನ್ನಿಂಥ ದಡ್ಡನನೂ ಹಾರಹಚ್ಚಿದ ಚೆಲುವು,
ಕಲಿತವರ ರೆಕ್ಕೆಗಳಿಗಿತ್ತು ಹೊಸ ಗರಿಗಳನು
ನೀಡುತಿದೆ ಕೃತಿಗಳಿಗೆ ಇಮ್ಮಡಿಯ ಘನತೆಯನು.
ನಿನಗಿರಲಿ ಹೆಮ್ಮೆ ನಾ ಬರೆದ ಕವಿತೆಯ ಕುರಿತು,
ನಿನ್ನಿಂದ ಪುಟಿದ ನಿನ್ನದೆ ಸೃಷ್ಟಿ ಅದಕಾಗಿ;
ಇತರ ಕೃತಿಗಳ ಶೈಲಿಯಂತು ಬಿಡು ಜ್ವಲಿಸೀತು
ನಿನ್ನ ಘನತೆಯ ಮಿಂಚು ತೊಳಗಿ ನುಡಿಗಳು ಬೆಳಗಿ.
ನೀನೆ ನನ್ನೆಲ್ಲ ಕಲೆ ಎತ್ತಿ ಮೆರೆಸುತ್ತಿರುವೆ.
ಅಜ್ಞಾನವನ್ನು ಸಹ ಜ್ಞಾನದೆತ್ತರದಲ್ಲೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 78
So oft have i invoked thee for my muse
Related Post
ಸಣ್ಣ ಕತೆ
-
ಬಾಳ ಚಕ್ರ ನಿಲ್ಲಲಿಲ್ಲ
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…