ನಿನ್ನ ಮಾತೆತ್ತಿದೆನೊ ಹುರುಪಳಿಸಿ ಕುಸಿಯುವೆನು,
ನನಗು ಗಟ್ಟಿಗನೊಬ್ಬ ನಿನ್ನ ಹೆಸರನು ಬಳಸಿ
ಸಮೆಸಿರುವ ಅದಕೆಂದೆ ತನ್ನೆಲ್ಲ ಸತ್ವವನು,
ಕಟ್ಟಿಹೋಗಿದೆ ನನ್ನ ನಾಲಿಗೆಯೆ ನುಡಿಯಳಿಸಿ.
ನಿನ್ನ ಗುಣಶೀಲ ಸಾಗರದಲ್ಲಿ ತೇಲುವುದು
ಹಿರಿಜಹಜು ಕಿರುದೋಣಿ ಭೇದ ಏನಿಲ್ಲದೆ.
ಅವನದಂತಲ್ಲ, ಇದು ಬಡದೋಣಿ ಸಣ್ಣದು,
ನಿನ್ನ ಕಡಲಲ್ಲಿ ಹೊರಟರೆ ಯಾವ ಎಗ್ಗಿರದೆ.
ನೀನೀವ ಸಣ್ಣ ನೆರವೂ ನನ್ನ ನಡೆಸುವುದು,
ಅವನೊ ಸಾಗುವ ನಿನ್ನ ಮೌನದಾಳದ ಮೇಲೆ.
ಬೆಲೆಯಿರದ ದೋಣಿ ಇದು ಅಪಘಾತಗೊಂಡರೂ,
ಅವನೊ ಎತ್ತರ, ಕಟ್ಟುಮಸ್ತು, ಹೆಮ್ಮೆಯ ತಾಳೆ.
ಅವನೆ ಯಶಗಳಿಸಿ ನಾ ಉಸುಬಿನಲಿ ಕುಸಿದರೆ,
ಬಲು ಘೋರ: ನನಗೆ ನನ್ನೊಲವೆ ಸಾವಾದರೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 80
O, how i faint when i of you do write
Related Post
ಸಣ್ಣ ಕತೆ
-
ಧನ್ವಂತರಿ
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ನಾಗನ ವರಿಸಿದ ಬಿಂಬಾಲಿ…
ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…