ನಿನ್ನ ಮಾತೆತ್ತಿದೆನೊ ಹುರುಪಳಿಸಿ ಕುಸಿಯುವೆನು,
ನನಗು ಗಟ್ಟಿಗನೊಬ್ಬ ನಿನ್ನ ಹೆಸರನು ಬಳಸಿ
ಸಮೆಸಿರುವ ಅದಕೆಂದೆ ತನ್ನೆಲ್ಲ ಸತ್ವವನು,
ಕಟ್ಟಿಹೋಗಿದೆ ನನ್ನ ನಾಲಿಗೆಯೆ ನುಡಿಯಳಿಸಿ.
ನಿನ್ನ ಗುಣಶೀಲ ಸಾಗರದಲ್ಲಿ ತೇಲುವುದು
ಹಿರಿಜಹಜು ಕಿರುದೋಣಿ ಭೇದ ಏನಿಲ್ಲದೆ.
ಅವನದಂತಲ್ಲ, ಇದು ಬಡದೋಣಿ ಸಣ್ಣದು,
ನಿನ್ನ ಕಡಲಲ್ಲಿ ಹೊರಟರೆ ಯಾವ ಎಗ್ಗಿರದೆ.
ನೀನೀವ ಸಣ್ಣ ನೆರವೂ ನನ್ನ ನಡೆಸುವುದು,
ಅವನೊ ಸಾಗುವ ನಿನ್ನ ಮೌನದಾಳದ ಮೇಲೆ.
ಬೆಲೆಯಿರದ ದೋಣಿ ಇದು ಅಪಘಾತಗೊಂಡರೂ,
ಅವನೊ ಎತ್ತರ, ಕಟ್ಟುಮಸ್ತು, ಹೆಮ್ಮೆಯ ತಾಳೆ.
ಅವನೆ ಯಶಗಳಿಸಿ ನಾ ಉಸುಬಿನಲಿ ಕುಸಿದರೆ,
ಬಲು ಘೋರ: ನನಗೆ ನನ್ನೊಲವೆ ಸಾವಾದರೆ.
*****
ಮೂಲ: ವಿಲಿಯಂ ಷೇಕ್ಸ್ಪಿಯರ್
Sonnet 80
O, how i faint when i of you do write
Related Post
ಸಣ್ಣ ಕತೆ
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…
-
ಸಾವು
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
-
ಉರಿವ ಮಹಡಿಯ ಒಳಗೆ
ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…