Home / ಕವನ / ಕವಿತೆ / ನೀಲಿ ಆಕಾಶ

ನೀಲಿ ಆಕಾಶ

ಪ್ರತಿನಿತ್ಯ ಒಂದು ಹೊಸ ಅನುಭವ
ಹೊತ್ತ ಸೂರ್ಯ ಹುಟ್ಟಿ, ಜಗದ
ಜನರ ನೆರೆ ಕೂದಲ ಮಧ್ಯೆ ಒಂದು ನಗೆ,
ಒಂದು ಹಾಡು, ಮಲ್ಲಿಗೆ ಅರಳುತ್ತವೆ ಘಮ್ಮಗೆ.

ಒಲ್ಲದ ಮನಸ್ಸು ರಾತ್ರಿ ಕಳೆದು,
ಬಿಳಿ ಹಕ್ಕಿ ಹಾರಾಡುವ ನೀಲ ಬಾನಿನಲಿ
ಬೆಳಕಿನ ಕಿರಣಗಳು ಸೋಕಿದಾಗ,
ನಿತ್ಯ ನೂತನದ ನಡುಗೆ ಅಡುಗೆ, ಪ್ರೀತಿಯಲ್ಲಿ
ಕಾಮದಲ್ಲಿ ಸಂಗತಿಗಳು.

ಏನು ಮಾಡಬೇಕು, ಯಾವುದು ಹುಡಕಬೇಕು,
ಎನ್ನುವ ಮನಸ್ಸುಗಳ ದಾರಿಗುಂಟ ಮೂಡಿಸಿವೆ,
ಪಾದದ ಗುರುತುಗಳು. ಸಂತೆಯಲಿ ಬಿಸಿ ಚಹಾ ಹೀರಿ,
ಚಪ್ಪರಿಕೆಯ ಕನಸುಗಳು ಮೂಟೆಗಳು ಚಲಿಸಿವೆ ದಾರಿಗುಂಟ.

ಓಡುವವರ, ಓಡಿದವರ, ತಿಳಿದವರ ತಿಳಿಯದವರ
ಲೆಕ್ಕಾಚಾರಗಳನ್ನು ಲೆಕ್ಕ ಇಟ್ಟವರು ಇಲ್ಲಾ, ಈ
ಲೋಕದ ವಿಸ್ಮಯಗಳಲಿ, ವರ್ತನೆಯ ಪರಿವರ್ತನೆಯ,
ಆಕಾಶವಾಣಿ ಸುದ್ದಿಗಳು ಬಿತ್ತರಗೊಂಡಿವೆ ಬಯಲ ತುಂಬ.

ಸೋಲು ಗೆಲುವಿನ ಪದಗಳು ಸೇರಿದ ಮಹಾಕಾವ್ಯ
ಕೊನೆಯ ಕ್ಷಿತಿಜದ ತುಂಬ ಬೆಟ್ಟ ಸಾಲು ಹರಡಿ,
ಒಮ್ಮೊಮ್ಮೆ ಭೆಟ್ಟಿಯಾಗಿ ಮತ್ತೊಮ್ಮೆ ಛೇದಿಸಿ,
ಮಗುದೊಮ್ಮೆ ತುಂಬಿ, ಖಾಲಿಯಾಗುವ ನೀಲಿ
ಆಕಾಶ ನೀನು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...