Home / ಕವನ / ಕವಿತೆ / ನೀಲಿ ಆಕಾಶ

ನೀಲಿ ಆಕಾಶ

ಪ್ರತಿನಿತ್ಯ ಒಂದು ಹೊಸ ಅನುಭವ
ಹೊತ್ತ ಸೂರ್ಯ ಹುಟ್ಟಿ, ಜಗದ
ಜನರ ನೆರೆ ಕೂದಲ ಮಧ್ಯೆ ಒಂದು ನಗೆ,
ಒಂದು ಹಾಡು, ಮಲ್ಲಿಗೆ ಅರಳುತ್ತವೆ ಘಮ್ಮಗೆ.

ಒಲ್ಲದ ಮನಸ್ಸು ರಾತ್ರಿ ಕಳೆದು,
ಬಿಳಿ ಹಕ್ಕಿ ಹಾರಾಡುವ ನೀಲ ಬಾನಿನಲಿ
ಬೆಳಕಿನ ಕಿರಣಗಳು ಸೋಕಿದಾಗ,
ನಿತ್ಯ ನೂತನದ ನಡುಗೆ ಅಡುಗೆ, ಪ್ರೀತಿಯಲ್ಲಿ
ಕಾಮದಲ್ಲಿ ಸಂಗತಿಗಳು.

ಏನು ಮಾಡಬೇಕು, ಯಾವುದು ಹುಡಕಬೇಕು,
ಎನ್ನುವ ಮನಸ್ಸುಗಳ ದಾರಿಗುಂಟ ಮೂಡಿಸಿವೆ,
ಪಾದದ ಗುರುತುಗಳು. ಸಂತೆಯಲಿ ಬಿಸಿ ಚಹಾ ಹೀರಿ,
ಚಪ್ಪರಿಕೆಯ ಕನಸುಗಳು ಮೂಟೆಗಳು ಚಲಿಸಿವೆ ದಾರಿಗುಂಟ.

ಓಡುವವರ, ಓಡಿದವರ, ತಿಳಿದವರ ತಿಳಿಯದವರ
ಲೆಕ್ಕಾಚಾರಗಳನ್ನು ಲೆಕ್ಕ ಇಟ್ಟವರು ಇಲ್ಲಾ, ಈ
ಲೋಕದ ವಿಸ್ಮಯಗಳಲಿ, ವರ್ತನೆಯ ಪರಿವರ್ತನೆಯ,
ಆಕಾಶವಾಣಿ ಸುದ್ದಿಗಳು ಬಿತ್ತರಗೊಂಡಿವೆ ಬಯಲ ತುಂಬ.

ಸೋಲು ಗೆಲುವಿನ ಪದಗಳು ಸೇರಿದ ಮಹಾಕಾವ್ಯ
ಕೊನೆಯ ಕ್ಷಿತಿಜದ ತುಂಬ ಬೆಟ್ಟ ಸಾಲು ಹರಡಿ,
ಒಮ್ಮೊಮ್ಮೆ ಭೆಟ್ಟಿಯಾಗಿ ಮತ್ತೊಮ್ಮೆ ಛೇದಿಸಿ,
ಮಗುದೊಮ್ಮೆ ತುಂಬಿ, ಖಾಲಿಯಾಗುವ ನೀಲಿ
ಆಕಾಶ ನೀನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...