ಶ್ರಾವಣ

ಶ್ರಾವಣದ ಗುಬ್ಬಿ ಮಳೆಯ ನಡುವೆ
ಆಗಾಗ ಬೀಸುವ ತಂಗಾಳಿ, ಮಲ್ಲಿಗೆ
ಬಿಳಿ ನಕ್ಷತ್ರಗಳಂತೆ ಬಳ್ಳಿ ತುಂಬ ಹರಡಿ
ಓಲಾಡಿದೆ, ಒಳಗೆ ಪುಟ್ಟ ಗೌರಿ ಅಲಂಕಾರವಾಗಿ
ಕುಳಿತಿದ್ದಾಳೆ. ಅಮ್ಮನ ಕೈಗಳಿಗೆ ಹೊಸ ಚಿಕ್ಕೀ
ಬಳೆ ಕಳೆ ಕೊಟ್ಟಿದೆ. ಅವನ ನೆನಪಲಿ ಅವಳ
ಅರಸಿಕ ಕುಂಕುಮ ಏರಿಸಿಕೊಂಡಿದ್ದಾಳೆ.

ಹಸಿರು ಬಸಿರು ಒಡಲು ತುಂಬ ಸಿರಿಗೌರಿಯ
ಅಂದ ಚಂದ, ಭಾರವಾದ ಒಡಲು ಹೊತ್ತ
ಪ್ರಥಾ, ಜಡೆಯ ತುಂಬ ಹೂಗಳು ಅರಳಿ
ಬಸುರಿ ಬಯಕೆ ಜಗದೊಳು, ನದಿ ಹರಿದ
ಬಯಲ ತುಂಬ ಆರತಿ ಆಚರಣೆಗಳು
ಅವನ ಪ್ರೇಮ ಅವಳ ಒಡಲ ತುಂಬಿದೆ.

ಆನಂದದ ಹರವು ಉಕ್ಕಿ, ಒಳಗೊಳಗೆ
ಚಿಗುರಿ ಚಿಮ್ಮುವ ಹಸಿರು ಜೀವ ಜಲ,
ಒಲಿದ ಮನಸ್ಸುಗಳ ಸಮ್ಮೋಹನ ನೆಲ,
ಬಾನು ಹಾಡಿದ ಅಮೃತರಾಗ, ಎದೆ ತುಂಬ
ಹಾಲು ಸ್ಪುರಿಸುವ ಭಾವ ಒಡಲೊಳು,
ಬೆಳಕಿನ ಅಕ್ಕರೆಯ ಪ್ರೀತಿಯ ರೂಪವತಿ ಕವಿತಾ.

ನಾದ-ನೀನಾದ ಶಬ್ದರೂಪಗಳ ರೂಪಂಗಳ
ಬರೆದ ಒಡಲು ತುಂಬದ ಹಸಿರು, ಮಥಿಸಿ
ಒಲವಾದ ಬದುಕು, ಅರಳಿದ ಶ್ರಾವಣದ
ಸಂಜೆ, ಸಂತಳಾದ ಕವಿತಾ ಬೆಳಕ ಹಿಡಿದಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ ಎಂಬ ಹೂದೋಟದಲ್ಲಿ
Next post ತಾಳೆಯ ಮರದಡಿ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…