ಹಳೇ ಮಂದಿ

ಅವರ ಪಾದಗಳು ನೆರಿಗೆಗಟ್ಟಿವೆ ಹಾಗೂ
ಹಾಕಿಕೊಂಡ ಬೂಟುಗಳು ಮೆತ್ತಗಾಗಿವೆ.
ಅವರು ಏನನ್ನೂ ಹುಡುಕುತ್ತಿಲ್ಲ ಬರೀ ನಿಧಾನವಾಗಿ
ನಡೆಯುತ್ತಿದ್ದಾರೆ. ಅವರೀಗ ಹಳದಿ ಎಲೆ.
ಹಗುರಾಗಿದ್ದಾರೆ ಮಾಗಿದ್ದಾರೆ.

ಅವರಿಗೆ ಹೊಸದೇನು ಬೇಕಾಗಿಲ್ಲ. ನಡೆದ
ದಾರಿಯ ಹಳವಂಡಗಳು ನೆನಪುಗಳು,
ಅವರಲ್ಲಿ ಹೂತು ಹೋಗಿವೆ. ರಾತ್ರಿಯ
ಕತ್ತಲಲ್ಲಿ ಅವರು ಕನವರಿಸುತ್ತಿದ್ದಾರೆ, ಮತ್ತು
ದಾಟಿ ಹೋಗುವ ದಾರಿಯನು ಕಣ್ಣುಗಳು ಅರಸುತ್ತಿವೆ.

ಒಮ್ಮೊಮ್ಮೆ ಖಾಲಿ ಆಕಾಶದ ಕಡೆ ಮುಖ
ಮಾಡುತ್ತಾರೆ, ನಡುಗುವ ಕೈಗಳಿಂದ ನೀರು
ಕುಡಿಯುತ್ತಾರೆ, ಗೋಡೆಯ ಮೇಲಿನ ಭಾವಚಿತ್ರಗಳ
ಅವರು ಗುರುತಿಸುತ್ತಿಲ್ಲ. ಕಣ್ಣುಗಳ ತುಂಬ ರಾತ್ರಿಯ
ಭಾವ ಭರವಾಗಿ ಸುಮ್ಮನೆ ನಿಟ್ಟುಸಿರು ಬಿಡುತ್ತಾರೆ.

ಅವರ ಕೋಣೆಗಳಲಿ ನಿಶ್ಯಬ್ದ ದಾಖಲಾಗಿದೆ.
ಮೊಮ್ಮಕ್ಕಳು ಮಾತು ಮರೆತಿದ್ದಾರೆ, ಏನೋ ಅರಸುವ
ಭೂತದಂತೆ ಮೌನದಲಿ ಅವರು ಹುದುಗಿದ್ದಾರೆ ಮತ್ತೆ
ಮನೆ ಮಂದಿ ಮರೆತವರಂತೆ ಇದ್ದಾರೆ. ವಿಷಾದದಲಿ
ಅವರು ಸದ್ದಿಲ್ಲದೇ ಕಾಲನ ಕರೆ ಕಾಯುತ್ತಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭವ್ಯ ಭಾರತ ಭೂಮಿ
Next post ಚಿತ್ರದ ಅಂಗಡಿ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…