Home / ಕವನ / ಕವಿತೆ / ಹಳೇ ಮಂದಿ

ಹಳೇ ಮಂದಿ

ಅವರ ಪಾದಗಳು ನೆರಿಗೆಗಟ್ಟಿವೆ ಹಾಗೂ
ಹಾಕಿಕೊಂಡ ಬೂಟುಗಳು ಮೆತ್ತಗಾಗಿವೆ.
ಅವರು ಏನನ್ನೂ ಹುಡುಕುತ್ತಿಲ್ಲ ಬರೀ ನಿಧಾನವಾಗಿ
ನಡೆಯುತ್ತಿದ್ದಾರೆ. ಅವರೀಗ ಹಳದಿ ಎಲೆ.
ಹಗುರಾಗಿದ್ದಾರೆ ಮಾಗಿದ್ದಾರೆ.

ಅವರಿಗೆ ಹೊಸದೇನು ಬೇಕಾಗಿಲ್ಲ. ನಡೆದ
ದಾರಿಯ ಹಳವಂಡಗಳು ನೆನಪುಗಳು,
ಅವರಲ್ಲಿ ಹೂತು ಹೋಗಿವೆ. ರಾತ್ರಿಯ
ಕತ್ತಲಲ್ಲಿ ಅವರು ಕನವರಿಸುತ್ತಿದ್ದಾರೆ, ಮತ್ತು
ದಾಟಿ ಹೋಗುವ ದಾರಿಯನು ಕಣ್ಣುಗಳು ಅರಸುತ್ತಿವೆ.

ಒಮ್ಮೊಮ್ಮೆ ಖಾಲಿ ಆಕಾಶದ ಕಡೆ ಮುಖ
ಮಾಡುತ್ತಾರೆ, ನಡುಗುವ ಕೈಗಳಿಂದ ನೀರು
ಕುಡಿಯುತ್ತಾರೆ, ಗೋಡೆಯ ಮೇಲಿನ ಭಾವಚಿತ್ರಗಳ
ಅವರು ಗುರುತಿಸುತ್ತಿಲ್ಲ. ಕಣ್ಣುಗಳ ತುಂಬ ರಾತ್ರಿಯ
ಭಾವ ಭರವಾಗಿ ಸುಮ್ಮನೆ ನಿಟ್ಟುಸಿರು ಬಿಡುತ್ತಾರೆ.

ಅವರ ಕೋಣೆಗಳಲಿ ನಿಶ್ಯಬ್ದ ದಾಖಲಾಗಿದೆ.
ಮೊಮ್ಮಕ್ಕಳು ಮಾತು ಮರೆತಿದ್ದಾರೆ, ಏನೋ ಅರಸುವ
ಭೂತದಂತೆ ಮೌನದಲಿ ಅವರು ಹುದುಗಿದ್ದಾರೆ ಮತ್ತೆ
ಮನೆ ಮಂದಿ ಮರೆತವರಂತೆ ಇದ್ದಾರೆ. ವಿಷಾದದಲಿ
ಅವರು ಸದ್ದಿಲ್ಲದೇ ಕಾಲನ ಕರೆ ಕಾಯುತ್ತಿದ್ದಾರೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...