ಅವನ ಬಿಟ್ಟು ಇವನ್ಯಾರು

ಎಲ್ಲಾ ಸ್ವಚ್ಛಂದದ ಸೆಳವು
ಒಳಗೊಳಗೆ ಇಳಿದ ತಂಗಾಳಿ,
ಮೈ ಹಗುರಾಗುವ ನಿನ್ನ ಸ್ಪರ್ಶ,
ಹರವು ದಾಟಿದ ಒಂದು ನದಿ ಬಯಲು.

ಘಮ ಘಮಿಸಿದ ಮುಂಜಾನೆ,
ಕಿರಣಗಳ ಸೋಕಿ ಉಮೇದಗೊಂಡ
ಭಾವಗಳು ಹೊಸ ಹಾಡು ಹಕ್ಕಿ ಕೊರಳು,
ಒಡಲ ತುಂಬ ಹಸಿರು ಚಿಮ್ಮುವ ಹವಣಿಕೆ.

ನಡೆಯುವ ದಾರಿತುಂಬ ಸತ್ಯದ ಬೆಳಕು.
ದಿವ್ಯ ದರ್ಶನಗಳ ಪದಕೋಶ ಎದೆಗೆ ಅಮರಿ,
ಮೂರ್ತದಲಿ ಅಮೂರ್ತಗಳ ಕವಿತೆಗಳು.
ಫಳಿಫಳಿಸಿದ ಕಣ್ಣ ಕಾಂತಿಯ ಪ್ರಭೆ ಮನೆಯೊಳಗೆ.

ನೆಲ ನೀರು ಗಾಳಿ ಮಳೆಯಲಿ ಕರಗಿ ಸೂರ್ಯ,
ಹುಡುಕುವ ಹೊಸ ಹುಟ್ಟಿನ ದಾರಿ ತಾಯಿ ಗರ್ಭ.
ಪುಟ್ಟ ಚಂದಿರನ ಬೆಳದಿಂಗಳು ಹರಡಿ ಹಾಸಿದ ಮಾಡು,
ಚಂದದ ಲಾಲೀ ಹಾಡಿದ ಪ್ರಥಾ ಪೂರ್ಣ ಸುಂದರಿ.

ಎಲ್ಲಾ ದಿಕ್ಕುಗಳು ಕಂಪನಗಳ ಕಂಪು ಹಣಿದು
ಬಯಲಲ್ಲಿ ಬೆತ್ತಲಾದ ಮುಪ್ಪು, ಅದಕ್ಕೂ ಇದಕ್ಕೂ
ಎಲ್ಲರೊಳಗೊಂಡು ಜೇನು ಹಂಚಿ ಜನನಿಬಿಡ ಸಂತೆ.
ಸಂತನಾಗುವ ಪರಿಯ ಅಚ್ಚರಿಯ ವಿಸ್ಮಯ ವ್ಯೋಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಓ ದೇವಿಯೆ
Next post ಶಾಪ !

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…