Home / ಕವನ / ಕವಿತೆ / ಅವನ ಬಿಟ್ಟು ಇವನ್ಯಾರು

ಅವನ ಬಿಟ್ಟು ಇವನ್ಯಾರು

ಎಲ್ಲಾ ಸ್ವಚ್ಛಂದದ ಸೆಳವು
ಒಳಗೊಳಗೆ ಇಳಿದ ತಂಗಾಳಿ,
ಮೈ ಹಗುರಾಗುವ ನಿನ್ನ ಸ್ಪರ್ಶ,
ಹರವು ದಾಟಿದ ಒಂದು ನದಿ ಬಯಲು.

ಘಮ ಘಮಿಸಿದ ಮುಂಜಾನೆ,
ಕಿರಣಗಳ ಸೋಕಿ ಉಮೇದಗೊಂಡ
ಭಾವಗಳು ಹೊಸ ಹಾಡು ಹಕ್ಕಿ ಕೊರಳು,
ಒಡಲ ತುಂಬ ಹಸಿರು ಚಿಮ್ಮುವ ಹವಣಿಕೆ.

ನಡೆಯುವ ದಾರಿತುಂಬ ಸತ್ಯದ ಬೆಳಕು.
ದಿವ್ಯ ದರ್ಶನಗಳ ಪದಕೋಶ ಎದೆಗೆ ಅಮರಿ,
ಮೂರ್ತದಲಿ ಅಮೂರ್ತಗಳ ಕವಿತೆಗಳು.
ಫಳಿಫಳಿಸಿದ ಕಣ್ಣ ಕಾಂತಿಯ ಪ್ರಭೆ ಮನೆಯೊಳಗೆ.

ನೆಲ ನೀರು ಗಾಳಿ ಮಳೆಯಲಿ ಕರಗಿ ಸೂರ್ಯ,
ಹುಡುಕುವ ಹೊಸ ಹುಟ್ಟಿನ ದಾರಿ ತಾಯಿ ಗರ್ಭ.
ಪುಟ್ಟ ಚಂದಿರನ ಬೆಳದಿಂಗಳು ಹರಡಿ ಹಾಸಿದ ಮಾಡು,
ಚಂದದ ಲಾಲೀ ಹಾಡಿದ ಪ್ರಥಾ ಪೂರ್ಣ ಸುಂದರಿ.

ಎಲ್ಲಾ ದಿಕ್ಕುಗಳು ಕಂಪನಗಳ ಕಂಪು ಹಣಿದು
ಬಯಲಲ್ಲಿ ಬೆತ್ತಲಾದ ಮುಪ್ಪು, ಅದಕ್ಕೂ ಇದಕ್ಕೂ
ಎಲ್ಲರೊಳಗೊಂಡು ಜೇನು ಹಂಚಿ ಜನನಿಬಿಡ ಸಂತೆ.
ಸಂತನಾಗುವ ಪರಿಯ ಅಚ್ಚರಿಯ ವಿಸ್ಮಯ ವ್ಯೋಮ.
*****

Tagged:

Leave a Reply

Your email address will not be published. Required fields are marked *

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...