Home / ಕವನ / ಕವಿತೆ / ಅವನ ಬಿಟ್ಟು ಇವನ್ಯಾರು

ಅವನ ಬಿಟ್ಟು ಇವನ್ಯಾರು

ಎಲ್ಲಾ ಸ್ವಚ್ಛಂದದ ಸೆಳವು
ಒಳಗೊಳಗೆ ಇಳಿದ ತಂಗಾಳಿ,
ಮೈ ಹಗುರಾಗುವ ನಿನ್ನ ಸ್ಪರ್ಶ,
ಹರವು ದಾಟಿದ ಒಂದು ನದಿ ಬಯಲು.

ಘಮ ಘಮಿಸಿದ ಮುಂಜಾನೆ,
ಕಿರಣಗಳ ಸೋಕಿ ಉಮೇದಗೊಂಡ
ಭಾವಗಳು ಹೊಸ ಹಾಡು ಹಕ್ಕಿ ಕೊರಳು,
ಒಡಲ ತುಂಬ ಹಸಿರು ಚಿಮ್ಮುವ ಹವಣಿಕೆ.

ನಡೆಯುವ ದಾರಿತುಂಬ ಸತ್ಯದ ಬೆಳಕು.
ದಿವ್ಯ ದರ್ಶನಗಳ ಪದಕೋಶ ಎದೆಗೆ ಅಮರಿ,
ಮೂರ್ತದಲಿ ಅಮೂರ್ತಗಳ ಕವಿತೆಗಳು.
ಫಳಿಫಳಿಸಿದ ಕಣ್ಣ ಕಾಂತಿಯ ಪ್ರಭೆ ಮನೆಯೊಳಗೆ.

ನೆಲ ನೀರು ಗಾಳಿ ಮಳೆಯಲಿ ಕರಗಿ ಸೂರ್ಯ,
ಹುಡುಕುವ ಹೊಸ ಹುಟ್ಟಿನ ದಾರಿ ತಾಯಿ ಗರ್ಭ.
ಪುಟ್ಟ ಚಂದಿರನ ಬೆಳದಿಂಗಳು ಹರಡಿ ಹಾಸಿದ ಮಾಡು,
ಚಂದದ ಲಾಲೀ ಹಾಡಿದ ಪ್ರಥಾ ಪೂರ್ಣ ಸುಂದರಿ.

ಎಲ್ಲಾ ದಿಕ್ಕುಗಳು ಕಂಪನಗಳ ಕಂಪು ಹಣಿದು
ಬಯಲಲ್ಲಿ ಬೆತ್ತಲಾದ ಮುಪ್ಪು, ಅದಕ್ಕೂ ಇದಕ್ಕೂ
ಎಲ್ಲರೊಳಗೊಂಡು ಜೇನು ಹಂಚಿ ಜನನಿಬಿಡ ಸಂತೆ.
ಸಂತನಾಗುವ ಪರಿಯ ಅಚ್ಚರಿಯ ವಿಸ್ಮಯ ವ್ಯೋಮ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...