Home / ಕವನ / ಕವಿತೆ / ಅರಳಿದ ಸಂಜೆ

ಅರಳಿದ ಸಂಜೆ

ಈ ಮೌನ ಸಂಜೆ ಬೀದಿಯಲ್ಲಿ ಹೊರಟಿವೆ
ಇರುವೆಗಳ ಮೆರವಣಿಗೆ, ಮರದ ಕೆಳಗೆ,
ಒಳಗೆ ಪೋರ ಚೆಂಡು ಹುಡುಕುತ್ತಿದ್ದಾನೆ,
ಮತ್ತೆ ಚಿಟ್ಟೆ ಹರಿದಾಡದೇ ಕುಳಿತಿದೆ ಹೂವಿನ ಮೇಲೆ.

ಖಾಲಿ ಹಾಳಿಯಲಿ ಅರಳಿವೆ ಕವಿಯ ನೀಲಿ ಅಕ್ಷರಗಳು,
ಮುಗಿಲ ತುಂಬ ಬೆಳ್ಳಕ್ಕಿ ಸಾಲು ಬುದ್ಧ ಗಯಾಕ್ಕೆ ಹಾರಿವೆ,
ರೂಹುಗಳ ಒಡಲಲ್ಲಿ ಅರಿಳಿದ ಪರಿಮಳದ ಅನ್ನ,
ಜೋಲಿಯಲಿ ಕನಸು ಕಂಗಳ ಕಂದನ ಸಂಜೆ ನಿದ್ದೆ.

ತಣ್ಣಗೆ ಹರಿಯುತ್ತಿದೆ ನದಿ. ಮೀನುಗಳ ಒಡಲು,
ಶರತ್ಕಾಲದ ತುಸು ಹಳದಿ ಎಲೆ ಎದುರಿದೆ ನಿರಾಳವಾಗಿ,
ಆಗಸದ ತುಂಬ ನೆನಪುಗಳ ಚುಕ್ಕಿ ಚಂದ್ರಮ ಅರಳುವಾಗ,
ಅಮ್ಮ ದೇವರ ಮುಂದೆ ನೀಲಾಂಜನ ಹಚ್ಚಿದಾಳೆ.

ಸ್ಪರ್ಶಕ್ಕಾಗಿ ಕಾದ ಸಂಜೆಯ ನೆರಳು ಬರೆದ ಅಕ್ಷರಗಳ,
ತಬ್ಬಿಕೊಂಡಿವೆ ಜಗದ ಜನರ ಬೆವರಿನ ನಿಟ್ಟುಸಿರು.
ಸಾವಿರ ಕವನಗಳ ಬೇರು ಮೌನಗರ್ಭದಲ್ಲಿ ಮೊಳೆತು,
ಸಂಜೆ ಚಂದ್ರ ಉದಯಿಸುತ್ತಾನೆ ಹೊಸ ಪ್ರತಿಮೆಗಳ ಹೊತ್ತು.

ಮರದಲ್ಲಿ ಹೂವು ಅರಳಿ ಕಂಪ ತೇಲಿದ ಕವನ,
ಸುಮ್ಮನೆ ಒಂದು ಖುಷಿಯ ಚಿಲುಮೆಯ ಕಿಡಿ.
ಸುಖದಲ್ಲಿ ಮಿಂದವರ, ದುಃಖದಲ್ಲಿ ಬಳಲಿದವರ,
ರಾತ್ರಿಯ ಕನಸುಗಳು ತೊಳೆಯುತ್ತವೆ. ಮತ್ತೆ ಶುಭ್ರ
ಮುಂಜಾವಿಗೆ ಕಾದಿವೆ ಕಣ್ಗಳು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...