Home / ಕವನ / ಕವಿತೆ / ಸ್ವಪ್ನದ ದೋಣಿ

ಸ್ವಪ್ನದ ದೋಣಿ

ಇಳಿ ಬಿಸಿಲಿನ ಎಲೆಯ ಮೇಲೆ ಕಿರಣಗಳು
ಮೂಡಿ ನಂದಾದೀಪ ಅರಳಿದೆ. ಕಂಬ ಬಳಸಿದ
ಬಳ್ಳಿಯ ತುಂಬ ಬಿಳಿ ಮೊಗ್ಗು ಬಿರಿದು, ಶಬ್ದಗಳು
ಹಸನಾದ ಬೀದಿಯ ತುಂಬ ಹರಡಿದೆ. ಅಲ್ಲಿ
ಕವಿಯ ಪರೀಕ್ಷೆ ನಡೆದಿದೆ. ಹೊಲದಲ್ಲಿ ಹಸಿ
ಜೋಳದ ತೆನೆಯಲಿ ಹಾಲು ಚಿಮ್ಮುತ್ತಿದೆ. ಮತ್ತೆ
ಮೌನ ಸಂಜೆಯಲಿ ಅವನ ನೆನಪುಗಳು ನೆತ್ತಿಗೆ
ಸವರಿ ಬೆಳ್ಳಕ್ಕಿಗಳು ಹಾರಿ ಹೋಗಿವೆ ತಿಳಿಸಂಜೆ.

ಪುಟ್ಟ ಹಕ್ಕಿಗಳ ಗೂಡು ಹಾಡು, ಕಡಲ
ಅಲೆ ಅಲೆಯ ಪ್ರತಿಬಿಂಬಿಸಿ, ಚಿಪ್ಪಿನಲ್ಲಿ ಅರಳಿತು ಮುತ್ತು.
ತೆಂಗಿನ ಗರಿಯ ಸಂದಿಯಿಂದ ಚೌತಿ ಚಂದ್ರಮ
ಇಣುಕಿ ಸ್ಪರ್ಶಿಸಿದೆ ಪ್ರಣಯ ಜೋಡಿಗಳ, ಹೊಸ
ವಾರ್ತೆ ನಾಳೆಗೆ ಅಚ್ಚಾಗಲು ಸಿದ್ಧವಾಗಿದೆ. ಜಾರಿದೆ
ಕಚಗುಳಿ ಇಟ್ಟ ಸೂರ್ಯ ಕಿರಣಗಳು, ರಾತ್ರಿಯ
ಕಪ್ಪು ಪರದೆಯ ತುಂಬ ಚಲನ ಚಿತ್ರಗಳ ರೀಲು.
ಆಗಸದಲ್ಲಿ ಹರಡಿವೆ ಅವನ ಕಣ್ಣುಗಳ ಮಿನುಗು.

ಹೂಗಳ ಸುವಾಸನೆ ಹೀರಿದ ಹಕ್ಕಿಗಳು ಹಾಡು
ತೊಟ್ಟಿಲು ತೂಗುತ್ತಿದ್ದಾಳೆ ತಾಯಿ. ತೊನೆ ಹಾಲು ತುಂಬಿ
ಎದೆಯ ಭಾವಕೆ ಬೇರುಗಳಲಿ ಇಳಿದ ತಂಪು ಲಾಲಿ.
ಕತ್ತಲೆಯ ರಾತ್ರಿಯಲ್ಲಿ ಹೊಸ ಬೆಳಕಿನ ಜಾಡು,
ಹಿಡಿದು ಕಾಲ ಮೈಲುಗಳು ಬಳಸಿ, ಪಯಣ
ಹೊರಟಿದೆ. ಹೆದ್ದಾರಿ ತುಂಬ ಕಪ್ಪು ನೆರಳುಗಳಾಟ.
ಜಗದ ಬೆಳಕಿಗೆ ಸೂರ್ಯ ಕಣ್ಣು ಮುಚ್ಚಿದ್ದಾನೆ.
ಪುಟ್ಟ ಮಗುವಿನ ಕೈಗಳು ಕೊರಳುಗಳ ತಬ್ಬಿವೆ.
ಏಕಾಂತ ಮೌನದಲಿ ಸುವಾಸನೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...