Home / ಕವನ / ಕವಿತೆ / ಈ ಸಂಜೆ

ಈ ಸಂಜೆ

ಕಾಮನ ಬಿಲ್ಲು ಹಿಡಿಯಲಾಗದ ನೋವು
ನೀನು ಮುಂಜಾನೆ ಕಿರಣಗಳ ಹೊತ್ತು ತಂದಾಗ,
ಕರಗಿತು ನದಿಯಾಗಿ ಅದ್ಭುತ ಸೌಂದರ್ಯವತಿ.
ನನ್ನೊಳಗಿಳಿದ ಜ್ಞಾನ, ಬೆಳಕಿನ ಹಣತೆ
ಮತ್ತೆ ಹೂವರಳಿದೆ ದಿನವೆಲ್ಲಾ ಘಮ ಘಮ.

ಮಡಿಕೆಯಲ್ಲಿ ತುಂಬಿಟ್ಟ ನೀರು ತಣ್ಣಗೆ ಆಗಿ
ಗದ್ದೆಯ ತುಂಬೆಲ್ಲಾ ಹಸಿರು ಹರಿದ ಕ್ಷಣ,
ನಿನ್ನ ಸ್ಪರ್ಶ ನೆನೆಪಿದೆ ಚೆನ್ನಾಗಿ ಮತ್ತು ಮಿಂಚುಳಿ
ನೀಲಿ ಹರಿಡಿದ ಆಕಾಶವ ಸ್ಪರ್ಶಿಸಿದೆ. ಹೊಳೆಯುತ್ತಿದೆ
ಕತ್ತಲೆ ಬೇರೂರಿದ ಮನದ ತುಂಬ ಚೆಂದಿರನ ಬೆಳಕು.

ಮನದ ತುಂಬ ನಿನ್ನೊಲವಿನ ಮಂದಹಾಸ ಅರಳಿ
ಹಿಂಬಾಲಿಸಿವೆ ಸುಂದರ ಕನಸುಗಳು, ಆಕಾಶ
ಮಲ್ಲಿಗೆ ಅರಳುತ್ತಿವೆ. ಸಂಜೆ ತುಂಬ ಹಕ್ಕಿಗಳ
ರಾಗಗಳು ಹರಡಿ ಸಾವಿರ ಕವನಗಳ ಬೇರು,
ಮೌನದಲಿ ಹೊಸ ಪ್ರತಿಮೆಗಳ ಹುಡುಕಾಟದ ಮೆರವಣಿಗೆ.

ಮುನಿಸಿಕೊಂಡ ಅಕ್ಷರಗಳು ಮತ್ತೆ ನಿನ್ನಿಂದ ವಾಪಸ್ಸು
ನನ್ನ ಮನೆಯ ಬಾಗಿಲಿಗೆ ಬಂದು ನಿಂತುಕೊಂಡಿವೆ.
ಸುರಿವ ಚಳಿಯಲಿ ದುಂಬಿಗಳ ಹಾರಾಟ, ಹೂಗಳಲಿ
ಎಂದೂ ಮುಗಿಯದ ಹಾಡು ಪೋಣಿಸುತ್ತಿದ್ದೇನೆ.
ಒಂದು ಹೂವಿನ ಸರ, ಈ ಸಂಜೆ ನಿನಗಾಗಿ ಕಾದಿದೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...